ಮಂಗಳೂರು: ಕರಾವಳಿಯ ಎರಡೂ ಜಿಲ್ಲೆಗಳಲ್ಲಿ ಬಿಸಿಲಿನ ಝಳ ಮುಂದುವರಿದಿದೆ.ಗ್ರಾಮೀಣ ಭಾಗದ ಕೆಲವೆಡೆ ಮುಂಜಾನೆ ಮಂಜು ಕವಿದಿದ್ದರೂ, ದಿನ ಕಳೆದಂತೆ ತಾಪಮಾನ ಹೆಚ್ಚಿದೆ.
ಬಿಸಿಲಿನ ತಾಪ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗಿದ್ದು, ಆದಷ್ಟು ಮಧ್ಯಾಹ್ನದ ಬಿಸಿಲಿನ ತಾಪದಿಂದ ದೂರವಿರುವುದು ಉತ್ತಮ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
ಫೆಬ್ರವರಿ 26 ರಂದು ಸೋಮವಾರ ನಗರದಲ್ಲಿ ದಿನದ ಗರಿಷ್ಠ ತಾಪಮಾನ 36.4 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 22.3 ಡಿಗ್ರಿ ಸೆಲ್ಸಿಯಸ್ ಎಂದು ಹವಾಮಾನ ಇಲಾಖೆ ತಿಳಿಸಿದೆ.