News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ ಸಮಾರಂಭ

Sahithya
Photo Credit : By Author

ಬಂಟ್ವಾಳ : ದ.ಕ.ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ಘಟಕ, ಸಮ್ಮೇಳನ ಸ್ವಾಗತ ಸಮಿತಿ ಯ ಆಶ್ರಯದಲ್ಲಿ ಅಮ್ಮುಂಜೆಯ ಅನುದಾನಿತ ಹಿ.ಪ್ರಾ.ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭಾನುವಾರ ಸಂಜೆ ತೆರೆ ಬಿತ್ತು.

ಮಂಗಳೂರು ವಿವಿ ವಿಶ್ರಾಂತ ಪ್ರಾಧ್ಯಾಪಕ ಡಾ.ನರಸಿಂಹಮೂರ್ತಿ ಸಮಾರೋಪ ಭಾಷಣ ಮಾಡಿದರು. ಸಂತೆ, ಜಾತ್ರೆ, ಹಬ್ಬಗಳು ಬದುಕಿಗೆ ಪೂರಕವಾಗಿದ್ದು, ಸಾಹಿತ್ಯ ಸಮ್ಮೇಳನ ಹೊಸಪೀಳಿಗೆಯನ್ನು ತನ್ನತ್ತ ತೆರೆದುಕೊಳ್ಳುತ್ತಿದೆ ಎಂದರು.

ಸಮ್ಮೇಳನಾಧ್ಯಕ್ಷ ನಿವೃತ್ತ ಪ್ರಾಂಶುಪಾಲ ಪ್ರೊ.ಕೆ.ಬಾಲಕೃಷ್ಣ ಗಟ್ಟಿ ಅನಿಸಿಕೆ ವ್ಯಕ್ತಪಡಿಸಿದರು. ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಎಂ.ಪಿ ಶ್ರೀನಾಥ, ಕಾರ್ಯದರ್ಶಿ ರಾಜೇಶ್ವರಿ, ತಾಲೂಕು ಕಸಾಪ ಘಟಕದ ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಕಾರ್ಯದರ್ಶಿಗಳಾದ ರಮಾನಂದ ನೂಜಿಪ್ಪಾಡಿ, ವಿ.ಸು.ಭಟ್, ನ್ಯಾಯವಾದಿ ಅಶ್ವನಿ ಕುಮಾರ್ ರೈ, ತಾಲೂಕು ಕಸಾಪ ಕೋಶಾಧಿಕಾರಿ ಅಬ್ದುಲ್ ರಹಿಮಾನ್, ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಉಮೇಶ ಸಾಲಿಯಾನ್, ಪ್ರಧಾನ ಕಾರ್ಯದರ್ಶಿ ಜನಾರ್ದನ ಅಮ್ಮುಂಜೆ ಉಪಸ್ಥಿತರಿದ್ದರು.

ಅಮ್ಮುಂಜೆ ಗ್ರಾಪಂ ಅಧ್ಯಕ್ಷ ವಾಮನ ಆಚಾರ್ಯ ಸ್ವಾಗತಿಸಿದರು. ಪ್ರಧಾನ ಸಂಚಾಲಕ ಅಬುಬಕ್ಕರ್ ಅಮ್ಮುಂಜೆ ವಂದಿಸಿದರು. ಬಿ.ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು