Categories: ಮಂಗಳೂರು

ಮಂಗಳೂರು: ಲಯನ್ಸ್ ಕ್ಲಬ್ ಕೊಡಿಯಾಲ್ ಬೈಲ್ ನ 29 ನೇ ವರ್ಷದ ಪದಗ್ರಹಣ ಸಮಾರಂಭ

ಮಂಗಳೂರು: ಲಯನ್ಸ್ ಕ್ಲಬ್ ಮಂಗಳೂರು ಕೊಡಿಯಾಲ್ ಬೈಲ್ ನ ೨೯ ನೇ ವರ್ಷದ ಪದಗ್ರಹಣ ಸಮಾರಂಭವು ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ಜಿಲ್ಲಾ ಜಿಎಲ್ ಟಿ ಸಂಯೋಜಕ ಕುಡ್ಪಿ ಅರವಿಂದ ಶೆಣೈ ಅವರು ಲೋಹಿಶೆಟ್ಟಿ ಅಧ್ಯಕ್ಷತೆಯ ತಂಡದ ಪದಗ್ರಹಣ ನೆರವೇರಿಸಿದರು. ಪ್ರತಿಷ್ಟಿತ ಕಲಾವಿದರ ಹಾಗೂ ಕಟ್ಟಡ ನಿರ್ಮಾಣಗಾರರನ್ನೊಳಗೊಂಡ ಕೊಡಿಯಾಲಬೈಲ್ ಕ್ಲಬ್ ಜಿಲ್ಲೆಯಲ್ಲಿ ಐದನೇ ಸ್ಥಾನ ಪಡೆದು ಸೇವೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸದಾ ಮುಂದಿದೆ ಎಂದು ಅಭಿನಂದಿಸಿದರು.

ಕಾರ್ಯದರ್ಶಿಯಾಗಿ ಸನತ್ ಕುಮಾರ್ ಕದ್ರಿ , ಕೋಶಾಧಿಕಾರಿಯಾಗಿ ದೇವಾನಂದ, ಉಪಾಧ್ಯಕ್ಷರಾಗಿ ಪ್ರದೀಪ್ ಆಳ್ವ ಕದ್ರಿ ಪ್ರಮಾಣ ವಚನ ಸ್ವೀಕರಿಸಿದರು. ಆರು ನೂತನ ಸದಸ್ಯರನ್ನು ಲಯನ್ಸ್ ಪರಿವಾರಕ್ಕೆ ಸೇರ್ಪಡೆ ಗೊಳಿಸಲಾಯಿತು.

ನಿಕಟಪೂರ್ವ ಅಧ್ಯಕ್ಷ ಹಾಗೂ ನೂತನ ವಲಯಾಧ್ಯಕ್ಷ ಮೋಹನ ಕೊಪ್ಪಲ ಕದ್ರಿ  ಹಾಗೂ ಕ್ಲಬ್ ನ ಸೇವಾಯೋಜನೆಗಳ ಪ್ರಧಾನ ಸಂಯೋಜಕ ಹಿರಿಯ ಸದಸ್ಯ ಕಿಶೋರ್ ಡಿ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ ವೀಲ್ ಚೇರ್  ಹಾಗೂ ದಿನಕರ ಸುವರ್ಣ ವಿದ್ಯಾನಿಧಿ ವಿತರಣೆ ಮಾಡಲಾಯಿತು.

ಲಿಯೋ ಪದಗ್ರಹಣ
ಸಚಿನ್ ಪೂಜಾರಿ, ಪ್ರಾರ್ಥನಾ ,ಹರ್ಷಿತಾ ಹರೀಶ್ ನೇತೃತ್ವದ ಲಿಯೋ ಕ್ಲಬ್ ಪದಗ್ರಹಣದೊಂದಿಗೆ ಆರು ಹೊಸ ಲಿಯೋ ಸದಸ್ಯರ ಸೇರ್ಪಡೆ ಮಾಡಲಾಯಿತು. ಜಿಲ್ಲಾ ಸಂಪುಟ ಕಾರ್ಯದರ್ಶಿ ಪಿ.ವಿ.ಅನಿಲ್ ಕುಮಾರ್ , ದ್ವಿತೀಯ ಉಪ ರಾಜ್ಯಪಾಲೆ ಭಾರತಿ ಬಿ.ಎಮ್. , ಮಾಜಿ ಲಯನ್ಸ್ ರಾಜ್ಯಪಾಲ ಅರುಣ್ ಶೆಟ್ಟಿ ಶುಭಾಶಂಸನೆ ಗೈದರು. ಪ್ರಾಂತೀಯ ಅಧ್ಯಕ್ಷ ಮಾಜಿ ರಾಜ್ಯಪಾಲರಾದ ಆಲ್ವಿನ್ ಪ್ಯಾಟ್ರಿಕ್ ಪತ್ರಾವೋ, ಜೆ.ಕೆ.ರಾವ್ , ರೊನಾಲ್ಡ್ ಗೋಮ್ಸ್ , ಪ್ರಾಂತೀಯ ಅಧ್ಯಕ್ಷೆ ಜ್ಯೋತಿ ಎಸ್. ಶೆಟ್ಟಿ, ಜಿಲ್ಲಾ ಸಂಪುಟ ಸಂಯೋಜಕ ಹರೀಶ್ ಆಳ್ವ ಉಪಸ್ಥಿತರಿದ್ದರು.

ವಿನೂತನ್ ಕಲಿವೀರ್ ಪದಗ್ರಹಣ ಅಧಿಕಾರಿಯನ್ನು ಪರಿಚಯಿಸಿದರು. ಕದ್ರಿ ನವನೀತ ಶೆಟ್ಟಿ ನಿರೂಪಿಸಿದರು. ದೇವಾನಂದ ಧನ್ಯವಾದ ಸಮರ್ಪಿಸಿದರು.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

5 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

5 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

6 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

6 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

7 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

8 hours ago