ಮಂಗಳೂರು: ಶ್ರೀ ರಾಮ ಸೇನೆ ಮಂಗಳೂರು ಇದರ ವತಿಯಿಂದ ೧೮ ನೇ ವರ್ಷದ ದತ್ತಮಾಲಾ ಅಭಿಯಾನದ ಪ್ರಯುಕ್ತ ೪ನೇ ವರ್ಷದ ದತ್ತ ದೀಪೋತ್ಸವ ಕಾರ್ಯಕ್ರಮ ಮಂಗಳೂರಿನ ಪಿವಿಎಸ್ ನ ಶ್ರೀ ಲಕ್ಷ್ಮೀನಾರಾಯಿಣಿ ದೇವಸ್ಥಾನದಲ್ಲಿ ನೆರವೇರಿತು.
ಕಾರ್ಯಕ್ರಮಕ್ಕೆ ಚಿಣ್ಣರಿಂದ ದೀಪಬೆಳಗಿಸಿ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಶ್ರೀರಾಮಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ ಶೆಟ್ಟಿ ಅಡ್ಯಾರ್, ತುಳು ಚಿತ್ರ ನಿರ್ದೇಶಕ, ನಿರ್ಮಾಪಕರಾದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್, ರಾಮಸೇನೆ ದ.ಕ ಜಿಲ್ಲಾಧ್ಯಕ್ಷ ಪ್ರದೀಪ್ ಮೂಡುಶೆಡ್ಡೆ, ಉಪಾಧ್ಯಕ್ಷ ಹರೀಶ್ ಬೊಕ್ಕಪಟ್ನ, ಅರುಣ್ ಕದ್ರಿ, ಉಲ್ಲಸ್ ಕದ್ರಿ, ಪುರುಷೋತ್ತಮ್ ಪಾವಂಜೆ ಮತ್ತಿತರರು ಉಪಸ್ಥಿತರಿದ್ದರು.