ಮಂಗಳೂರು: ಜಿಲ್ಲಾಡಳಿತದ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಜ.26ರ ಗುರುವಾರ ಬೆಳಿಗ್ಗೆ 9 ಗಂಟೆಗೆ ನಗರದ ನೆಹರೂ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಸಂದೇಶ ನೀಡುವರು.
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ, ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸಂಸದರಾದ ಡಿ. ವೀರೇಂದ್ರ ಹೆಗ್ಗಡೆ, ಶಾಸಕರಾದ ಯು.ಟಿ. ಖಾದರ್, ಡಾ. ಭರತ್ ಶೆಟ್ಟಿ ವೈ, ಹರೀಶ್ ಪೂಂಜಾ, ರಾಜೇಶ್ ನಾಯ್ಕ್ ಯು, ಸಂಜೀವ ಮಠಂದೂರು, ಉಮನಾಥ ಎ ಕೋಟ್ಯಾನ್ ಹಾಗೂ ಡಿ. ವೇದವ್ಯಾಸ ಕಾಮತ್, ವಿಧಾನ ಪರಿಷತ್ನ ಶಾಸಕರಾದ ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ, ಎಸ್.ಎಲ್. ಭೋಜೆಗೌಡ, ಪ್ರತಾಪ್ ಸಿಂಹ ನಾಯಕ್ ಹಾಗೂ ಮಂಜುನಾಥ ಭಂಡಾರಿ, ಮಂಗಳೂರು ಮೇಯರ್ ಜಯಾನಂದ ಅಂಚನ್, ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಜ.26ರ ಕಾರ್ಯಕ್ರಮದ ವಿವರ:
ಬೆಳಿಗ್ಗೆ 8.45 ಗಂಟೆಗೆ ನೆಹರೂ ಮೈದಾನದಲ್ಲಿ ಸಮಾವೇಶ, 8.55ಕ್ಕೆ ಮುಖ್ಯ ಅಥಿತಿಗಳ ಆಗಮನ, 9 ಗಂಟೆಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್ ಅವರಿಂದ ಧ್ವಜಾರೋಹಣ ಮತ್ತು ರಾಷ್ಟ್ರಗೀತೆ (ಪೋಲಿಸ್ ಬ್ಯಾಂಡಿನಲ್ಲಿ). ನಂತರ 9.15 ಗಂಟೆಗೆ ಸಚಿವರು ಗಣರಾಜ್ಯೋತ್ಸವ ಸಂದೇಶ. ಬೆಳಿಗ್ಗೆ 9.30ಕ್ಕೆ ಪಥಸಂಚಲನ ಪೆರೇಡ್ ವಿಸರ್ಜನೆ ಹಾಗೂ 10 ಗಂಟೆಗೆ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ 10.45 ಗಂಟೆಗೆ ಕಾರ್ಯಕ್ರಮದ ವಂದನಾರ್ಪಣೆ ನೆರವೇರಲಿದೆ.