ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರಾವಳಿಗೆ ಒಪ್ಪುವಂತಹ ಹೆಸರಿಡಬೇಕೆಂಬ ಹೋರಾಟಕ್ಕೆ ಹಲವು ವರ್ಷಗಳಾದರೂ ರಾಜ್ಯ ಸರ್ಕಾರ ಇನ್ನೂ ಪ್ರಸ್ತಾವನೆಯನ್ನು ಕೇಂದ್ರ ಸರಕಾರಕ್ಕೆ ಕಳುಹಿಸಿಲ್ಲ.
ವಿಶೇಷವೆಂದರೆ ಜಿಲ್ಲಾಡಳಿತದಿಂದಲೂ ಅಧಿಕೃತ ಶಿಫಾರಸು ಹೋಗಿಲ್ಲ. ವೀರರಾಣಿ ಅಬ್ಬಕ್ಕ , ಯುವಿ ಶ್ರೀನಿವಾಸ ಮಲ್ಯ , ಕೋಟಿ ಚೆನ್ನಯ , ಬ್ರಹ್ಮಶ್ರೀ ನಾರಾಯಣ ಗುರು ,ಕಮಲದೇವಿ ಚಟ್ಟೋಪಾಧ್ಯಾಯ ಮುಂತಾದ ಹೆಸರುಗಳನ್ನು ಸಂಘಟನೆಗಳು ಪ್ರಸ್ತಾಪಿಸಿವೆ. ಈ 2020ರ ನವೆಂಬರ್ ನಲ್ಲಿ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಕಂಪನಿ ವಹಿಸಿಕೊಂಡ ಬಳಿಕ ಅದಾನಿ ಏರ್ಪೋರ್ಟ್ ಎಂದು ಹೆಸರಿಸಲಾಗಿತ್ತು ಜನರ ವಿರೋಧ ಬಂದ ಹಿನ್ನೆಲೆಯಲ್ಲಿ ಹಳೆ ಹೆಸರು ಉಳಿಯಿತು.
ಕೋಟಿ ಚೆನ್ನಯರ ಹೆಸರಿಡಲು ನಿಲ್ದಾಣ ವ್ಯಾಪ್ತಿಯ ಮಳವೂರು ಗ್ರಾಮ ಪಂಚಾಯತ್ 2016 ರಲ್ಲಿ ನಿರ್ಣಯ ಕೈಗೊಂಡಿತ್ತು ಈ ಬಗ್ಗೆ ವಿಧಾನಸಭೆಯಲ್ಲಿ ಶಾಸಕ ಉಮಾನಾಥ್ ಕೋಟಿಯನ್ ಹಾಗೂ ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ನ ಹರೀಶ್ ಕುಮಾರ್ ಪ್ರಸ್ತಾಪಿಸಿದರು ಪ್ರಯೋಜನವಾಗಲಿಲ್ಲ.
2020ರಲ್ಲಿ ಮಂಗಳೂರು , ಹುಬ್ಬಳ್ಳಿ , ಮೈಸೂರು ,ಬೆಳಗಾವಿ ,ಕಲಬುರ್ಗಿ ವಿಮಾನ ನಿಲ್ದಾಣಗಳಿಗೆ ಮರುನಾಮಕರಣ ಮಾಡುವ ಪ್ರಸ್ತಾವ ರಾಜ್ಯ ಸರ್ಕಾರದ ಮುಂದಿತ್ತು ಇನ್ನು ಅಂತಿಮ ನಿರ್ಧಾರವಾಗಿಲ್ಲ ಮಂಗಳೂರು ವಿಮಾನ ನಿಲ್ದಾಣಕ್ಕೆ ಹೆಸರಿಡುವಂತೆ ಅನೇಕರು ಪತ್ರಗಳನ್ನು ಬರೆದಿದ್ದರು ಪ್ರಸ್ತಾವದ ರೂಪದಲ್ಲಿ ಸರಕಾರಕ್ಕೆ ಹೋಗಿಲ್ಲ.
2014 ರಲ್ಲಿ ಸಚಿವರಾಗಿದ್ದ ಯುಟಿ ಖಾದರ್ ಕೂಡ ರಾಣಿ ಅಬ್ಬಕ್ಕನ ಹೆಸರಿಡುವುದಾಗಿ ಹೇಳಿದ್ದರು, ಯಾವ ಕಾರಣಕ್ಕೆ ಹಿಂದಿನ ಹೆಸರು ಬದಲಿಸಬೇಕು ಹಾಗೂ ನಿರ್ದಿಷ್ಟ ಹೆಸರು ಇಡಬೇಕೆ ಎನ್ನುವುದನ್ನು ಆಸಕ್ತ ಪ್ರಯೋಜಕರು ಸಂಘಟಕರು ಪತ್ರದ ಮೂಲಕ ವಿಮಾನ ನಿಲ್ದಾಣದ ಮುಖ್ಯಸ್ಥರಿಗೆ ಸಲ್ಲಿಸಬೇಕು , ಅವರು ಅದನ್ನು ರಾಜ್ಯ ಸರಕಾರಕ್ಕೆ ಅಲ್ಲಿನ ಶಿಫಾರಸು ರೂಪದಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಕಳಿಸಲಾಗುವುದು ಈ ಶಿಫಾರಸ್ಸುಗಳನ್ನು ಸಚಿವಾಲಯ ಪರಿಶೀಲಿಸಿ ನಿರ್ಧರಿಸುತ್ತದೆ, ಕೆಲವೊಮ್ಮೆ ಕೇಂದ್ರ ಸರ್ಕಾರವೇ ಸ್ವಯಂ ಪ್ರೇರಣೆಯಿಂದ ನಾಮಕರಣ ಮಾಡಲು ಬಹುದು ,ಕೇಂದ್ರ ಸರಕಾರ ಅಂಗೀಕರಿಸುವ ಹೆಸರು ವಿಮಾನ ನಿಲ್ದಾಣ ನೀಡಲಾಗುತ್ತದೆ.