ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ನೈತಿಕ ಪೊಲೀಸ್ ಗಿರಿಗೆ ಕಡಿವಾಣ ಹಾಕಬೇಕು ಜಿಲ್ಲೆಯಲ್ಲಿ ಅಮಾಯಕರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಮಟ್ಟ ಹಾಕಬೇಕು ಎಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾ ದಳದ ವತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು.
ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಅನೈತಿಕ ಗುಂಡಾಗಿರಿ ನಡೆಯುತ್ತಿದೆ ಚುನಾವಣೆ ಬಂದಾಗ ಇಂತಹ ಘಟನೆಗಳು ಹೆಚ್ಚಾಗುತ್ತಿದೆ ಚುನಾವಣೆಗೆ ಎರಡು ಮೂರು ತಿಂಗಳು ಬಾಕಿ ಇರುವಾಗ ಇಂತಹ ಘಟನೆ ನಡೆಯುತ್ತಿರುವುದರ ಹಿಂದೆ ಒಂದು ಸಂಘಟನೆಯ ಷಡ್ಯಂತರ ಅಡಗಿದೆ.
ರಾಜ್ಯ ಮತ್ತು ಕೇಂದ್ರ ಸರ್ಕಾರವೇ ಇಂತಹ ಆರೋಪಿಗಳಿಗೆ ಕುಮ್ಮಕ್ಕು ನೀಡುತ್ತಿದೆ ಎಂದು ನಾಯಕರು ಬಿಜೆಪಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು, ಕಾನೂನು ಕೈಗೊತ್ತಿಕೊಳ್ಳುವ ಸಂಘಟನೆಗಳ ವಿರುದ್ಧ ಪೊಲೀಸರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು ಪ್ರತಿಭಟನೆಯಲ್ಲಿ ಮುಖಂಡರಾದ ಅಕ್ಷಿತ್ ಸುವರ್ಣ,ಇಕ್ಬಾಲ್ ಮುಲ್ಕಿ, ಸುಶೀಲ್, ರತ್ನಾಕರ ಸುವರ್ಣ, ಕಲೀಲ್, ಹಕ್ಕಿಮ್ ಮೊದಲಾದವರಿದ್ದರು.