News Karnataka Kannada
Thursday, May 09 2024
ಮಂಗಳೂರು

ಮಂಗಳೂರು: ರಾಜ್ಯದ ಜನರ ಕಲ್ಯಾಣಕ್ಕಾಗಿ ಕರ್ನಾಟಕ ಜನತಾ ಪಕ್ಷ

The Karnataka Janata Party is active for the welfare of the people of the state.
Photo Credit : News Kannada

ಮಂಗಳೂರು: ರಾಜ್ಯದ ಜನರ ಕಲ್ಯಾಣಕ್ಕಾಗಿ ಕರ್ನಾಟಕ ಜನತಾ ಪಕ್ಷ ಸಕ್ರಿಯವಾಗಿದೆ. ಇನ್ನೆರಡು ತಿಂಗಳಲ್ಲಿ ಕರ್ನಾಟಕ ವಿಧಾನಸಭೆಯ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಲಿದೆ.

ಈ ಬಾರಿಯ  ಅಸೆಂಬ್ಲಿ ಚುನಾವಣೆಯಲ್ಲಿ ಕರ್ನಾಟಕ ಜನತಾ ಪಕ್ಷದಿಂದ 224 ವಿಧಾನಸಭೆ ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ನಡೆದಿದೆ.  ರಾಜ್ಯದ ಜನ ಬಿಜೆಪಿ.ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ದುರಾಡಳಿತದಿಂದ ಬೇಸತ್ತು ಹೋಗಿದ್ದಾರೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಕರ್ನಾಟಕ ಜನತಾ ಪಕ್ಷ ಸಂಕಲ್ಪ ಮಾಡಿದೆ.

ರಾಜ್ಯ ರಾಜಕೀಯದಲ್ಲಿ ಅರಾಜಕತೆ ತಾಂಡವಾಡುತ್ತಿದೆ. ಇಂತಹ  ಅರಾಜಕೀಯ  ಪರಿಸ್ಥಿತಿ ತಿಳಿಗೊಳಿಸಿ ನ್ಯಾಯಸಮ್ಮತ ಆಡಳಿತ   ಬರಬೇಕಾಗಿದೆ. ರಾಜ್ಯದ ಜನ ನಮ್ಮದೇ ಆದ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರುವುದನ್ನು ಎದುರು ನೋಡುತ್ತಿದ್ದಾರೆ. ಕರ್ನಾಟಕ ಜನತಾ ಪಕ್ಷದ ಮೇಲೆ ರಾಜ್ಯದ ಜನರಿಗೆ ಸಂಪೂರ್ಣ ವಿಶ್ವಾಸ ವಿದೆ. ಆದ್ದರಿಂದ ಜನರಾಯದಂತೆ ಕರ್ನಾಟಕ ಜನತಾ ಪಕ್ತದಿಂದ ಅಭ್ಯರ್ಥಿಗಳು ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಾರೆ. ಕೆಲವೇ ದಿನದಲ್ಲಿ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು ಎಂದು ಕೆಜೆಪಿ ಪಕ್ಷದ ಪದ್ಮನಾಭ ಪ್ರಸನ್ನ ಕುಮಾರ್  ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು