ಮಂಗಳೂರು: ಜಾನುವಾರುಗಳನ್ನು ಕುರ್ಬಾನಿ ಹಾಗೂ ಬಲಿ ನೀಡಲು ನಿಷೇಧವಿರುವ ಕಾಯ್ದೆಯನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಇರುವ ವಿಎಚ್ ಪಿ ಆಗ್ರಹಿಸಿದೆ.
ವಿಎಚ್ ಪಿ ಪ್ರಾಂತ ಗೋರಕ್ಷಾ ಪ್ರಮುಖ್ ಕಟೀಲು ದಿನೇಶ್ ಪೈ ಮಾತನಾಡಿ, ಜಾನುವಾರುಗಳನ್ನು ಕುರ್ಬಾನಿ ಹಾಗೂ ಬಲಿಗಾಗಿ ಸಾಗಾಟವನ್ನು ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಅಕ್ರಮವಾಗಿ ಸಾಗಾಟ ಮಾಡುವ ಚಾಲಕರು, ಜಾನುವಾರು ಮಾಲಕರು ಹಾಗೂ ವಾಹನ ವಾಹನದ ಮಾಲಕರು ಅಪರಾಧಿಗಳಾಗುತ್ತಾರೆ. ಇಂತಹ ಅಕ್ರಮ ಜಾನುವಾರು ಸಾಗಾಟ ಮಾಡುವವರನ್ನು ಪೊಲೀಸರು ವಶಕ್ಕೆ ತೆಗೆದುಕೊಳ್ಳುವುದು ಮಾತ್ರವಲ್ಲ, ಸಾರ್ವಜನಿಕರು ಅದನ್ನು ತಡೆದು ಆರೋಪಿಗಳನ್ನು ಪೊಲೀಸ್ ಠಾಣೆಗೆ ಒಪ್ಪಿಸಲು ಅವಕಾಶವಿದೆ. ಅಲ್ಲದೆ ಅಕ್ರಮ ಗೋಸಾಗಾಟಗಾರರ ಬಗ್ಗೆ ಮಾಹಿತಿ ದೊರೆತಲ್ಲಿ 112 ಅಥವಾ ಆ್ಯನಿಮಲ್ ಹೆಲ್ಪ್ ಲೈನ್ 2277100200 ಗೆ ಕರೆ ಮಾಡಿ ತಿಳಿಸಬಹುದು ಎಂದು ಹೇಳಿದರು.
ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯ್ದೆ 2020ರನ್ವಯ 13 ವರ್ಷದೊಳಗಿನ ಜಾನುವಾರುಗಳನ್ನು ಬಲಿ, ಕುರ್ಬಾನಿ ಮಾಡಲು ಅವಕಾಶವಿಲ್ಲ. ಈ ಅಪರಾಧ ಸಾಬೀತಾದಲ್ಲಿ ಸೆಕ್ಷನ್ 12ರ ಪ್ರಕಾರ 3-7 ವರ್ಷಗಳ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ನಿಂದ 5 ಲಕ್ಷ ರೂ.ವರೆಗೆ ದಂಡ ವಿಧಿಸಲಾಗಿತ್ತದೆ.
ಈ ಅಪರಾಧ ಮರುಕಳಿಸಿದ್ದಲ್ಲಿ 10 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ. ಅಲ್ಲದೆ ಬಲಿ ಕೊಟ್ಟ ಸ್ಥಳವನ್ನು ಮುಟ್ಟುಗೋಲು ಮಾಡಬಹುದು. ಅವರ ಮೇಲಿನ ಅಪರಾಧ ಸಾಬೀತಾದಲ್ಲಿ ಈ ಸ್ಥಳವು ಶಾಶ್ವತವಾಗಿ ಮುಟ್ಟುಗೋಲು ಹಾಕಲಾಗುತ್ತದೆ ಎಂದು ವಿಎಚ್ ಪಿ ಪ್ರಾಂತ ಗೋರಕ್ಷಾ ಪ್ರಮುಖ್ ಕಟೀಲು ದಿನೇಶ್ ಪೈ ಹೇಳಿದರು.
ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿದೆ.
ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.
ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ.
ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…
ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ …
ಅಫಜಲಪುರ ತಾಲೂಕಿನ ಆನೂರ ಗ್ರಾಮದ ಆದಿ ಬಸವೇಶ್ವರ ನೂತನ ಕಳಸಾರೋಹಣ ಮತ್ತು ನೂತನ ಮಂದಿರ ಉದ್ಘಾಟನಾ ಕಾರ್ಯಕ್ರಮ ಹನ್ನೊಂದು ಮಠಗಳ…