News Karnataka Kannada
Saturday, May 11 2024
ಮಂಗಳೂರು

ಮಂಗಳೂರು: ರಾಜ್ಯ ಬಿಜೆಪಿ ಸರಕಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದ ನಳಿನ್ ಕುಮಾರ್ ಕಟೀಲು

Nalin Kumar Kateel
Photo Credit : News Kannada

ಮಂಗಳೂರು: ರಾಜ್ಯ ಬಿಜೆಪಿ ಸರಕಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಪೂರ್ಣ ಅವಧಿಗೆ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದರು.

ರಾಜ್ಯದಲ್ಲಿ ಬಿಜೆಪಿಯ ಮೂರನೇ ಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಡಿರುವ ಟ್ವೀಟ್ ಗೆ ಮಂಗಳೂರಿನಲ್ಲಿ ಮಂಗಳವಾರ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ವಿಚಾರದಲ್ಲಿ ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ. ಮುಂದಿನ ಚುನಾವಣೆ ಯನ್ನು ಯಡಿಯೂರಪ್ಪ ಅವರ ಮಾರ್ಗದರ್ಶನ ದಲ್ಲಿ, ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಎದುರಿಸಲಾಗುವುದು ಎಂದರು.

ಸಿದ್ದರಾಮೋತ್ಸವದಿಂದ ಕಾಂಗ್ರೆಸ್ ನಲ್ಲಿ ಒಳಜಗಳ ಹೆಚ್ಚಾಗಿದೆ. ಕಾಂಗ್ರೆಸ್‌ ಹಿರಿಯ ನಾಯಕರೇ ಸಿದ್ದರಾಮಯ್ಯ ಅವರನ್ನು ದೂರುತ್ತಿದ್ದಾರೆ. ಮುಂದಿನ ಸಿಎಂ ಜಗಳ ಅಧಿಕಗೊಂಡಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಇಡಿ ತನಿಖೆ ಎದುರಿಸುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಜಾಮೀನು ಮೂಲಕ ಜೈಲಿನಿಂದ ಹೊರಗಿದ್ದಾರೆ. ಇದನ್ನೆಲ್ಲಾ ಮರೆಮಾಚಲು ಕಾಂಗ್ರೆಸ್ ಪಕ್ಷ ಬಿಜೆಪಿ ಬಗ್ಗೆ ಗೊಂದಲದ ಹೇಳಿಕೆ ನೀಡುತ್ತಿದೆ. ಮೊದಲು ಅವರು ಪಕ್ಷದೊಳಗಿನ ಗೊಂದಲ ಸರಿಪಡಿಸಿಕೊಳ್ಳಲಿ. ಬಳಿಕ ಬಿಜೆಪಿ ಬಗ್ಗೆ ಮಾತನಾಡಲಿ ಎಂದು ಅವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು