News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಅಭಿವೃದ್ಧಿ ನೆಪವೊಡ್ಡಿದ ಸರ್ಕಾರದಿಂದ ಮಂಗಳೂರಲ್ಲಿ ಸಾವಿರಾರು ವೃಕ್ಷಗಳ ಸಂಹಾರ!

thousands of trees have been destroyed
Photo Credit : News Kannada

ಮಂಗಳೂರು: ಮಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ಕಾಮಗಾರಿಗೆ ಮಂಗಳೂರಿನಿಂದ ಸಾಣೂರುವರೆಗಿನ 5,000ಕ್ಕೂ ಹೆಚ್ಚು ಮರಗಳನ್ನು ಕತ್ತರಿಸಲು ನಿರ್ಧರಿಸಲಾಗಿದೆ. ಅಧಿಕಾರಿಗಳ ನಿರ್ಧಾರಕ್ಕೆ ಪರಿಸರ ಪ್ರೇಮಿಗಳು ಆಕ್ರೋಶ ಹೊರಹಾಕಿದ್ದು, ಮರಗಳ ಉಳಿವಿಗಾಗಿ ಹೋರಾಟ ಮಾಡುತ್ತಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 169ರ ಕುಲಶೇಖರ-ಸಾಣೂರು ನಡುವೆ ಚತುಷ್ಪಥ ಕಾಮಗಾರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಬಿಕರ್ನಕಟ್ಟೆಯಿಂದ ಸಾಣೂರುವರೆಗಿನ ಬರೋಬ್ಬರಿ 5000ಕ್ಕೂ ಅಧಿಕ ಮರಗಳ ಮಾರಣಹೋಮಕ್ಕೆ ಗುರುತಿಸಲಾಗಿದೆ. ಬಿಕರ್ನಕಟ್ಟೆಯಿಂದ ಮಿಜಾರು ನಡುವಿನ ಪ್ರದೇಶ ಮಂಗಳೂರು ವಲಯ ಅರಣ್ಯಾಧಿಕಾರಿಗಳ ವ್ಯಾಪ್ತಿಯಲ್ಲಿದೆ. ಅಲ್ಲಿಂದ ಸಾಣೂರುವರೆಗಿನ ಪ್ರದೇಶ ಮೂಡುಬಿದಿರೆ ವಲಯದ ಅರಣ್ಯಾಧಿಕಾರಿಗಳ ವ್ಯಾಪ್ತಿಯಲ್ಲಿದೆ.

ಈ ಭಾಗದ ಸರಕಾರಿ ಜಾಗದಲ್ಲಿರುವ ಮರಗಳನ್ನು ಈಗಾಗಲೇ ಗುರುತಿಸಲಾಗಿದೆ. ಖಾಸಗಿ ಸ್ಥಳದಲ್ಲಿನ ಮರಗಳನ್ನು ಇನ್ನಷ್ಟೇ ಗುರುತಿಸಬೇಕಾಗಿದೆ. ಅಧಿಕಾರಿಗಳು ಹೆದ್ದಾರಿ ನಿರ್ಮಾಣದ ಬಳಿಕ ಹಸಿರೀಕರಣಗೊಳಿಸುವ ಬಗ್ಗೆ ಭರವಸೆಯನ್ನು ನೀಡುತ್ತಾರೆ. ಅಭಿವೃದ್ಧಿಗೆ ತಮ್ಮದೇನು ತಕರಾರಿಲ್ಲ. ಆದರೆ, ಅಭಿವೃದ್ಧಿಯ ನೆಪದಲ್ಲಿ ಮರಗಳನ್ನು ಕಡಿಯುವ ಬದಲು ಸ್ಥಳಾಂತರಿಸುವ ಮೂಲಕ ಅವುಗಳನ್ನು ಉಳಿಸಬಹುದು. ಇಲ್ಲದಿದ್ದಲ್ಲಿ ಹೊಸದಾಗಿ ಮರಗಳನ್ನು ಬೆಳೆಸಲು ಸ್ಥಳಾವಕಾಶ ಕೊಡಬೇಕೆಂಬುದು ಪರಿಸರ ಪ್ರೇಮಿಗಳ ಅಭಿಪ್ರಾಯ.

ಮರಗಳ ಬಲಿಯನ್ನು ಉಳಿಸಲು 60 ಮೀಟರ್ ಅಗಲಗೊಳಿಸಬೇಕಿದ್ದ ಮಂಗಳೂರು-ಕಾರ್ಕಳ ಹೆದ್ದಾರಿಯನ್ನು 45 ಮೀಟರ್‌ಗೆ ಸೀಮಿತಗೊಳಿಸಲಾಗಿದೆ. ಇದೇ ಮಾದರಿಯನ್ನು ಕುಲಶೇಖರ-ಸಾಣೂರು ಚತುಷ್ಪಥ ಕಾಮಗಾರಿಯಲ್ಲೂ ಅನುಸರಿಸಬೇಕಾಗಿದೆ. ಮರಗಳನ್ನು ಉಳಿಸುವ ನಿಟ್ಟಿನಲ್ಲಿ ಮರು ಸರ್ವೇ ಮಾಡಬೇಕೆಂಬ ಪರಿಸರ ಪ್ರೇಮಿಗಳ ಬೇಡಿಕೆಗೆ ಅಧಿಕಾರಿಗಳು ಇನ್ನೂ ಸ್ಪಷ್ಟ ಉತ್ತರವನ್ನು ನೀಡಿಲ್ಲ. ಆದರೆ, ಅವರ ಬೇಡಿಕೆಯಂತೆ ಮರಗಳ ಸ್ಥಳಾಂತರ ಮಾಡುವುದೋ ಅಥವಾ ಇನ್ನಾವುದಾದರೂ ಕ್ರಮ ಕೈಗೊಳ್ಳಬಹುದೇ ಎಂಬ ಬಗ್ಗೆ ಚಿಂತನೆ ನಡೆಸುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30359
ಶರಣ್‌ ರಾಜ್

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು