ಮಂಗಳೂರು: ಮೂಡುಬಿದಿರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೂಡಬಿದ್ರೆಯ ಬಡಗಮಿಜಾರು ಗ್ರಾಮದ ನಿವಾಸಿ ದಿನೇಶ್ ಪೂಜಾರಿ , ಬೆಳ್ತಂಗಡಿ ತಾಲ್ಲೂಕಿನ ಉಳ್ಳ ಗುಡ್ಡೆ ಹೊಸಮನಿ ನಿವಾಸಿ ಸುಕೇಶ್ ಪೂಜಾರಿ , ಮೂಡಬಿದಿರೆಯ ನಿರ್ಮಾಣದ ಡಕ್ಕೆ ನಿವಾಸಿ ಹರೀಶ್ ಪೂಜಾರಿ ಬಂಧಿತ ಆರೋಪಿಗಳು.
ವರದಿಯ ಪ್ರಕಾರ ಆಗಸ್ಟ್ ಮೂವತ್ತ ರಂದು ಮಂಗಳವಾರ ರಾತ್ರಿ ಹತ್ತು ಮೂವತ್ತು ರ ಸುಮಾರಿಗೆ ಈ ಮೂವರು ಮೂಡಬಿದಿರೆಯ ಅಶ್ವತ್ಥಪುರದ ಬೇರಿಂಜೆ ಗುಡ್ಡೆ ನಿವಾಸಿ ಕಮಲಾ ಎಂಬ ಒಂಟಿ ಮಹಿಳೆಯ ಮನೆಗೆ ನುಗ್ಗಿದ್ದರು. ಕಮಲ ಅವರ ಮೇಲೆ ಮಚ್ಚಿನಿಂದ ದೈಹಿಕ ಹಲ್ಲೆ ನಡೆಸಿ ಚಿನ್ನಾಭರಣ ಕದ್ದು ಪರಾರಿಯಾಗಿದ್ದರು ಈ ಕುರಿತು ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳ್ಳತನ ಮಾಡಿದ ಚಿನ್ನಾಭರಣಗಳನ್ನು ದುಷ್ಕರ್ಮಿಗಳು ಮಂಗಳೂರಿಗೆ ತೆರಳುತ್ತಿದ್ದಾಗ ಕುಲಶೇಖರ ಚರ್ಚ್ ಗೇಟ್ ಬಳಿ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಸುಮಾರು 4ಪಾಯಿಂಟ್ 5ಲಕ್ಷ ರೂ ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಳವು ಮಾಡಿದ ಆಭರಣಗಳು 2ಸ್ಕೂಟರ್ ಗಳು 3ಮೊಬೈಲ್ ಗಳನ್ನು 1ಮಚ್ಚು 2ಮಂಕಿ ಕ್ಯಾಪ್ ಗಳನ್ನು ವಶಕ್ಕೆ ಪಡೆದಿದ್ದಾರೆ.