ಮಂಗಳೂರು: ಕಾಲೇಜು ಬಿಟ್ಟು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರಿಗೆ ಕಾರು ಗುದ್ದಿದ ಘಟನೆ ವರದಿಯಾಗಿದೆ. ಗಾಯಗೊಂಡಿರುವ ವಿದ್ಯಾರ್ಥಿನಿಯರು ಸುಬ್ರಹ್ಮಣ್ಯ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.
ಸಿಂಚನಾ, ಹನಿಷ್ಕಾ, ಬಿಂಬಿಕಾ ಎಂಬ ವಿದ್ಯಾರ್ಥಿನಿಯರು ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದಾರೆ. ಅಲ್ಲದೆ ಎಂಟು ಮಂದಿ ವಿದ್ಯಾರ್ಥಿಗಳಿಗೆ ಗಾಯವಾಗಿದೆ. ಗುದ್ದಿದ ಕಾರು ಪ್ರವಾಸಿಗರಿಗೆ ಸೇರಿದ್ದು ಎಂಬ ಮಾಹಿತಿ ಲಭ್ಯವಾಗಿದೆ.
ವಿದ್ಯಾರ್ಥಿನಿಯರು ಎಂದಿನಂತೆ ಕಾಲೇಜು ಬಿಟ್ಟು ಮನೆ ಕಡೆಗೆ ಹೆಜ್ಜೆ ಹಾಕುತ್ತಿದ್ದರು. ಈ ವೇಳೆ ವಲ್ಲೀಶ ಸಭಾಭವನದ ಎದುರು ವಿದ್ಯಾರ್ಥಿನಿಯರಿಗೆ ಹಿಂದಿನಿಂದ ಬಂದ ಕಾರು ಗುದ್ದಿದೆ. ಗುದ್ದಿದ ರಭಸಕ್ಕೆ ನೆಲಕ್ಕೆ ಬಿದ್ದ ವಿದ್ಯಾರ್ಥಿನಿಯರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಕಾರನ್ನು ಸುಬ್ರಹ್ಮಣ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.