ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಭಾರೀ ಸಿದ್ಧತೆ ಕೈಗೊಳ್ಳಲಾಗಿದೆ ಇದೇ ವೇಳೆ ಮೋದಿ ಆಗಮನದ ಸಮಯ ಬದಲಾವಣೆ ಮಾಡಲಾಗಿದ್ದು ಮಧ್ಯಾಹ್ನ 1ಗಂಟೆಗೆ ಮಂಗಳೂರು ತಲುಪಲಿದ್ದಾರೆ ಎಂದು ಬಿಜೆಪಿ ನಾಯಕರು ಮಾಹಿತಿ ನೀಡಿದ್ದಾರೆ.
ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಲಕ್ಷಾಂತರ ಕಾರ್ಯಕರ್ತರು ಅಭಿಮಾನಿಗಳು ಸೇರಲಿದ್ದಾರೆ 8ವಿಧಾನಸಭಾ ಕ್ಷೇತ್ರದಿಂದ ಸಾವಿರಾರು ಕಾರ್ಯಕರ್ತರು ಬರಲಿದ್ದಾರೆ ಇದಕ್ಕಾಗಿ ಸಾವಿರದ ನಾನ್ನೂರ ಅರವತ್ತ್ 1ಬಸ್ ಇನ್ನೂರು ಟೆಂಪೊ ಟ್ರಾವೆಲರ್ ಗಳನ್ನು ಆಯಾ ಭಾಗದಿಂದ ಬುಕ್ಕಿ ಮಾಡಲಾಗಿದೆ ಬೆಳಿಗ್ಗೆ ಹನ್ನೊಂದು ಮೂವತ್ತು ರ ಒಳಗೆ ಕಾರ್ಯಕರ್ತರು ಮೈದಾನದಲ್ಲಿ ಸೇರಬೇಕೆಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಹೇಳಿದ್ದಾರೆ.
ಮೋದಿಯವರು ಎನ್ ಎಂಪಿಟಿಗೆ ನೇರವಾಗಿ ಹೆಲಿಕಾಪ್ಟರ್ ನಲ್ಲಿ ಆಗಮಿಸಲಿದ್ದಾರೆ ಅಲ್ಲಿ ಕೆಲವು ಯೋಜನೆಗಳಿಗೆ ಶಿಲಾನ್ಯಾಸ ಮತ್ತು ಲೋಕಾರ್ಪಣೆ ಮಾಡಲಿದ್ದಾರೆ ಮಧ್ಯಾಹ್ನ 1ಗಂಟೆಯಿಂದ 3ಗಂಟೆ ತನಕ ಸಭಾ ಕಾರ್ಯಕ್ರಮವೂ ಇರಲಿದೆ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಸೇರಿದಂತೆ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ ಈಗಾಗಲೇ ಕಾರ್ಯಕ್ರಮಕ್ಕೆ ಮೈದಾನದಲ್ಲಿ ಸಕಲ ಸಿದ್ಧತೆ ಕೆಲಸ ಪೂರ್ಣವಾಗಿದೆ ಕಾರ್ಯಕ್ರಮದಲ್ಲಿ ಎಪ್ಪತ್ತು ಸಾವಿರ ಮಂದಿ ಕೇಂದ್ರದ ಯೋಜನೆ ಫಲಾನುಭವಿಗಳು ಭಾಗಿಯಾಗಲಿದ್ದಾರೆ ಇದಲ್ಲದೆ ಜಿಲ್ಲೆಯ ಎಲ್ಲೆಡೆಯಿಂದ ಕಾರ್ಯಕರ್ತರು ಬರಲಿದ್ದಾರೆಂದು ಸುದರ್ಶನ ಮೂಡುಬಿದಿರೆ ಹೇಳಿದ್ದಾರೆ.