ಮಂಗಳೂರು: ನಗರಕ್ಕೆ ನೀರು ಪೂರೈಕೆ ಮಾಡುವ ವೆಂಟೆಡ್ ಡ್ಯಾಂ ನಲ್ಲಿ ನೀರು ಸತತ ಇಳಿಕೆಯಾಗಿದ್ದು, ಶುಕ್ರವಾರದಂದು ನೀರಿನ ಮಟ್ಟ 5.85 ಮೀಟರ್ ನಷ್ಟಿತ್ತು. ಇದು ಕಳೆದ ನಾಲ್ಕು ವರ್ಷದಲ್ಲೇ ಅತ್ಯಂತ ಕಡಿಮೆ ನೀರಿನ ಪ್ರಮಾಣ ಎಂದು ಹೇಳಲಾಗಿದೆ. ಇದು ಮುಂದೆ 50ರಿಂದ 55 ದಿನಗಳವರೆಗಷ್ಟೇ ನೀರು ಪೂರೈಸುವಷ್ಟಿದೆ. ಹಾಗೊಂದು ವೇಳೆ, ಬೇಸಗೆಯಲ್ಲಿ ಮಳೆ ಬಾರದಿದ್ದರೆ ಮಂಗಳೂರಿಗೆ ನೀರಿನ ಬರ ಕಾಡಲಿದೆ. ಈ ಸಮಸ್ಯೆಯನ್ನು ಸೂಕ್ತವಾಗಿ ನಿರ್ವಹಿಸುವ ಬಗ್ಗೆ ಮಹಾನಗರ ಪಾಲಿಕೆ ಯೋಜಿಸಬೇಕಿದೆ.
ಮಂಗಳೂರು ನಗರಕ್ಕೆ ನೀರುಣಿಸುವ ತುಂಬೆ ವೆಂಟೆಡ್ ಡ್ಯಾಂನಲ್ಲಿ ಒಳಹರಿವು ಒಂದೇ ಸವನೆ ಕಡಿಮೆಯಾಗಿದ್ದು, ಏಪ್ರಿಲ್ ತಿಂಗಳಾಂತ್ಯದೊಳಗೆ ಬೇಸಿಗೆ ಮಳೆ ಬಾರದಿದ್ದರೆ ನಗರದಲ್ಲಿ ನೀರಿಗೆ ಹಾಹಾಕಾರ ಸೃಷ್ಟಿಯಾಗಲಿದೆ. ಪ್ರಸ್ತುತ ಡ್ಯಾಂನಲ್ಲಿ ಶೇಖರಣೆಯಾಗಿರುವ ನೀರು 50ರಿಂದ 55 ದಿನಕ್ಕಷ್ಟೇ ಪೂರೈಕೆಯಾಗಬಹುದಾಗಿದೆ.
ನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ವೆಂಟೆಡ್ ಡ್ಯಾಂನಲ್ಲಿ ಶುಕ್ರವಾರ ಸಂಜೆಯ ವೇಳೆಗೆ ನೀರಿನ ಮಟ್ಟ 5.85 ಮೀಟರ್ ಗೆ ಇಳಿಕೆಯಾಗಿದೆ. ಮಹಾನಗರಪಾಲಿಕೆ ಆಡಳಿತ ಮತ್ತು ನಗರದ ಜನತೆ ಈಗಲೇ ಮುಂದಾಲೋಚನೆ ಮಾಡದಿದ್ದರೆ 2019ರಲ್ಲಿ ಆದ ನೀರಿನ ಸಮಸ್ಯೆ ಈ ಬಾರಿಯೂ ನಗರವನ್ನು ಬಿಗಡಾಯಿಸಲಿದೆ.
ತುಂಬೆ ವೆಂಟೆಡ್ ಡ್ಯಾಂನಲ್ಲಿ ಶೇಖರಣೆಯಾಗುತ್ತಿರುವ ನೀರಿನ ಪ್ರಮಾಣ ಹೋಲಿಕೆ ಮಾಡಿದರೆ 4 ವರ್ಷದಲ್ಲೇ ಅತ್ಯಧಿಕ ಇಳಿಕೆಯಾಗಿದೆ. 2020ರ ಮಾ.3ರಂದು 6 ಮೀಟರ್ ನೀರಿದ್ದರೆ, ಆ ಬಳಿಕ ಪ್ರತಿವರ್ಷ ಈ ದಿನಕ್ಕೆ 6 ಮೀಟರ್ ನೀರಿತ್ತು. ಈ ಬಾರಿ ಮಾ.3ಕ್ಕೆ 5.85 ಮೀಟರ್ಗೆ ಇಳಿಕೆಯಾಗಿದ್ದು ಇದು 4 ವರ್ಷದಲ್ಲೇ ಅತೀ ಕಡಿಮೆಯಾಗಿದೆ. 2019ರ ನೀರಿನ ಬಳಕೆಯನ್ನು ಹೋಲಿಸಿದರೆ ಈ ವರ್ಷಕ್ಕೆ ಶೇ.12ರಷ್ಟು ನೀರಿನ ಬೇಡಿಕೆ ಹೆಚ್ಚಳವಾಗಿದೆ. ಇದರಿಂದ ಈ ಬಾರಿ ಮತ್ತಷ್ಟು ಬೇಗ ನೀರಿನ ಹಾಹಾಕಾರ ಸೃಷ್ಟಿಯಾಗುವ ಸಾಧ್ಯತೆಯಿದೆ ಎನ್ನುತ್ತಾರೆ ಅಧಿಕಾರಿಗಳು.
ತುಂಬೆ ವೆಂಟೆಡ್ ಡ್ಯಾಂಗೆ ಒಳಹರಿವು ಕಡಿಮೆಯಾದ ಕಾರಣ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಹೊಸ ಕೈಗಾರಿಕೆ, ಕಟ್ಟಡ ಕಾಮಗಾರಿಗಳಿಗೆ ಹೊಸ ನೀರಿನ ಸಂಪರ್ಕ ನಿಲ್ಲಿಸಲಾಗಿದೆ. ಈಗ ಇರುವ ಕೈಗಾರಿಕೆಗಳಿಗೆ ರೇಷನಿಂಗ್ ಮಾಡಲು ಸೂಚನೆ ನೀಡಲಾಗಿದೆ.
ಎಂಆರ್ನಲ್ಲಿ ಪ್ರಸ್ತುತ 18.9(ಸಮುದ್ರ ಮಟ್ಟಕ್ಕಿಂತ ಮೇಲೆ) ಮೀ. ನೀರು ಇದ್ದು, ಇದರಲ್ಲಿ 14.5 ಮೀ. ಮಂಗಳೂರು ನಗರಕ್ಕೆ ಬಳಸಬಹುದು. ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿ, ಅನಿವಾರ್ಯವಾದರೆ ಮಾತ್ರ ಎಎಂಆರ್ ಡ್ಯಾಂನ ನೀರು ಬಳಕೆ ಮಾಡಲು ನಿರ್ಧರಿಸಲಾಗಿದೆ.
ಪ್ರಸ್ತುತ ಒಟ್ಟು 18 ಎಂಜಿಡಿ ನೀರು ಕೈಗಾರಿಕೆಗಳಿಗೆ ರವಾನೆಯಾಗುತ್ತಿದೆ. ತುಂಬೆ ಡ್ಯಾಂನಿಂದ ಎಂಸಿಎಫ್ಗೆ 2 ಎಂಜಿಡಿ, ಎನ್ಎಂಪಿಟಿಎ 0.5 ಎಜಿಡಿ, ಇತರ ಕೈಗಾರಿಕೆಗಳಿಗೆ 1 ಎಂಜಿಡಿ ನೀರು ಪೂರೈಕೆಯಾಗುತ್ತಿದೆ. ಎಎಂಆರ್ನಿಂದ ಎಂಆರ್ಪಿಎಲ್ಗೆ 6 ಎಂಜಿಡಿ ಹಾಗೂ ಎಸ್ಇಝೆಡ್ಗೆ 8 ಎಂಜಿಡಿ ನೀರು ಪೂರೈಕೆ ಮಾಡಲಾಗುತ್ತಿದೆ. ಮುಂದೆ ಅನಿವಾರ್ಯವಾದರೆ ಕೈಗಾರಿಕೆಗಳು, ಕಾಮಗಾರಿಗಳಿಗೆ ನೀರು ಸ್ಥಗಿತ ಮಾಡುವ ಚಿಂತನೆ ನಡೆಸಲಾಗುತ್ತಿದೆ