Categories: ಮಂಗಳೂರು

ಮಂಗಳೂರು: ಡಂಪಿಂಗ್‌ ಯಾರ್ಡ್‌ನಂತಾದ ಕುದ್ಮುಲ್ ರಂಗರಾವ್ ಪುರಭವನ ಆವರಣ

ಮಂಗಳೂರು: ನಗರದ ಕುದ್ಮುಲ್ ರಂಗರಾವ್ ಪುರಭವನದ ಆವರಣ ಅಕ್ಷರಶಃ ಡಂಪಿಂಗ್ ಯಾರ್ಡ್ ಅಗಿ ಪರಿವರ್ತನೆಯಾಗಿದ್ದು, ದಿನದಿಂದ ದಿನಕ್ಕೆ ಬಂದು ಬೀಳುವ ತ್ಯಾಜ್ಯದ ಪ್ರಮಾಣ ಹೆಚ್ಚಾಗುತ್ತಿದೆ. ಪರಿಣಾಮ ಮತ್ತೊಂದು ಪಚ್ಚನಾಡಿಯಾಗಿ ಪರಿವರ್ತನೆಯಾಗಿದೆ.

ಪುರಭವನದ ನಗರದ ಸಭಾಂಗಣಗಳಲ್ಲಿ ಒಂದಾಗಿದ್ದು, ಸರಕಾರಿ, ಸಂಖ್ಯೆಯಲ್ಲಿ ಕಾರ್ಯಕ್ರಮಗಳು ಆಯೋಜನೆಗೊಳ್ಳುತ್ತವೆ. ಇಲ್ಲಿ ಇಂತಹ ಕಾರ್ಯಕ್ರಮಗಳಲ್ಲಿ ದೇಶ ವಿದೇಶಗಳಿಂದ ಬರುವ ಜನರು ಪಾಲ್ಗೊಳ್ಳುವುದರಿಂದ, ಆವರಣದಲ್ಲಿರುವ ತ್ಯಾಜ್ಯ ರಾಶಿ ಅವರಲ್ಲಿ ನಗರದ ಸೌಂದರ್ಯದ ಬಗ್ಗೆ ತಪ್ಪು ಕಲ್ಪನೆ ಮೂಡಿಸಬಹುದು ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

ಈ ಮೊದಲು ನಗರದ ವಿವಿಧೆಡೆ ಬೀದಿ ಬಿದಿ ವ್ಯಾಪಾರಿಗಳನ್ನು ಕಾರ್ಯಾಚರಣೆ ಮೂಲಕ ತೆರವುಗೊಳಿಸಿ, ಅವರ ಗೂಡಂಗಡಿ ಸಹಿತ ವಿವಿಧ ವಸ್ತುಗಳನ್ನು ಪುರಭವನದ ಆವರಣದಲ್ಲಿ ತಂದು ಹಾಕುತ್ತಿದ್ದರು. ಇದೀಗ ಅವುಗಳೊಂದಿಗೆ ಇತರ ವಸ್ತುಗಳು ಬಂದು ಸೇರಿವೆ. ಶೀಘ್ರ ಟೆಂಡರ್ ಕರೆದು ಇವುಗಳನ್ನು ತೆರವುಗೊಳಿಸುವ ಅವಶ್ಯಕತೆಯಿದೆ.

ಪುರಭವನದಲ್ಲಿ ಆಯೋಜನೆಗೊಳ್ಳುವ ಕಾರ್ಯಕ್ರಮಗಳ ಊಟೋಪಚಾರದ ತ್ಯಾಜ್ಯವನ್ನು ವಿಲೇವಾರಿ ಮಾಡುವ ಬದಲು ಆವರಣದಲ್ಲೇ ಸುರಿಯಲಾಗುತ್ತದೆ. ಸ್ಟೇಟ್ ಬ್ಯಾಂಕ್‌ನ ಸರ್ವಿಸ್ ಬಸ್ ನಿಲ್ದಾಣವನ್ನು ಮರು ನಿರ್ಮಾಣ ಮಾಡುವ ವೇಳೆ ಅಲ್ಲಿದ್ದ ಕಬ್ಬಿಣದ ಬೀಮ್‌ಗಳನ್ನು ತಂದು ರಾಶಿ ಹಾಕಲಾಗಿದೆ. ಉಳಿದಂತೆ ಪೊಲೀಸ್ ಇಲಾಖೆಗೆ ಸಂಬಂಧಪಟ್ಟ ಬ್ಯಾರಿಕೇಡ್ ಗಳು, ಪಾಲಿಕೆಯ ವಿವಿಧೆಡೆಯ ಬೀದಿ ದೀಪ ಕಂಬಗಳ ರಾಶಿ, ಕಾಮಗಾರಿ ವೇಳೆ ತೆರವುಗೊಳಿಸಲಾದ ಸ್ಮಾರ್ಟ್ ಪೋಲ್ ಟಯರ್‌ಗಳ ರಾಶಿ, ತುಂಡಾದ ಇಂಟರ್ ಲಾಕ್ಗಳ ರಾಶಿ, ವಿದ್ಯುತ್ ಕೇಬಲ್ ಗಳು ಹೀಗೆ ಸಾಕಷ್ಟು ವಸ್ತುಗಳನ್ನು ತಂದು ಸುರಿಯಾಗಿದೆ. ಪಾರ್ಕಿಂಗ್‌ಗೆ ಸ್ಥಳದ ಕೊರತೆ ಪುರಭವನದ ಪಾರ್ಕಿಂಗ್ ಸ್ಥಳದಲ್ಲೇ ಈ ತಾಜ್ಯ, ಗುಜಿರಿ ವಸ್ತುಗಳನ್ನು ತಂದು ಹಾಕಿರುವುದರಿಂದ ಪಾರ್ಕಿಂಗ್‌ ಸ್ಥಳಾವಕಾಶ ವಿಲ್ಲದಂತಾಗಿದೆ. ದ್ವಿಚಕ್ರ ವಾಹನಗಳ ನಿಲುಗಡೆಗೆ ಮೀಸಲಾಗಿರಿಸಿರುವ ಸ್ಥಳದಲ್ಲೇ ಗುಜರಿ ವಸ್ತುಗಳನ್ನು ರಾಶಿ ಹಾಕಿದ್ದು, ಇದರಿಂದ ಸವಾರರು ಬೇರೆ ಕಡೆಗಳಲ್ಲಿ ವಾಹನ ನಿಲ್ಲಿಸುವಂತಾಗಿದೆ. ಪಾರ್ಕಿಂಗ್‌ಗೆ ಸ್ಥಳದ ಕೊರತೆ ಉಂಟಾಗುತ್ತಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಗುಜರಿ ವಸ್ತುಗಳನ್ನು ಹಾಕಲು ಸ್ಥಳದ ಕೊರತೆಯಿದೆ ಎನ್ನುತ್ತಾರೆ ಅಧಿಕಾರಿಗಳು ಮತ್ತು ಜನ ಪ್ರತಿನಿಧಿಗಳು. ಈ ಮೊದಲು ಪಾಲಿಕೆ ಕಟ್ಟಡದ ಹಿಂಭಾಗದಲ್ಲೇ ಇಂತಹ ಗುಜರಿ ವಸ್ತುಗಳನ್ನು ತಂದು ಸುರಿಯಲಾಗುತ್ತಿತ್ತು. ಈ ಬಗ್ಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದೀಗ ಪಾಲಿಕೆ ಆವರಣದಲ್ಲಿಯೇ ತಂದು
ಸುರಿಯಲಾಗುತ್ತಿದೆ.

Ashika S

Recent Posts

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

9 mins ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

26 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

41 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

57 mins ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

1 hour ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

2 hours ago