ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರಸಂಘ ಮತ್ತುಸಾವಯವ ಕೃಷಿ ಕ ಬಳಗ ಮಂಗಳೂರು ಇದರ ಸಹಯೋಗದಲ್ಲಿ ಸಾವಯವ ಕೈತೋಟ ,ಟೆರೇಸ್ ಗಾರ್ಡನ್ ತರಬೇತಿ ಶಿಬಿರ ಜುಲೈ 22 ರಂದು ಪೂರ್ವಾಹ್ನ 11ಗಂಟೆಗೆ ನಗರದ ಪತ್ರಿಕಾಭವನ ( ಲೇಡಿ ಹಿಲ್ ಊರ್ವ ಮಾರುಕಟ್ಟೆ ರಸ್ತೆ)ದಲ್ಲಿ ನಡೆಯಲಿದೆ.
ನಮ್ಮ ಮನೆಯಂಗಳದಲ್ಲಿ, ಸಣ್ಣ ಬಾಲ್ಕನಿಯಲ್ಲಿ ತರಕಾರಿ, ಹೂವು ಬೆಳೆಯುವುದು ಹೇಗೆ ಎಂಬುದನ್ನು ಈ ಶಿಬಿರದಲ್ಲಿ ಮಂಗಳೂರು ಸಾವಯವ ಕೃಷಿಕ ಗ್ರಾಹಕ ಬಳಗ ಕೈತೋಟ ಕ್ರಾಂತಿ ಎಂಬ ಯೋಜನೆಯಡಿ ತರಬೇತಿ ನೀಡಲಿದ್ದಾರೆ. ನಗರದ ಮನೆಮನೆಯಲ್ಲಿ ಸಾವಯವ ಪದ್ಧತಿಯಲ್ಲಿ ಕಾಲಮಾನಗಳ ಹೂವು ಮತ್ತು ತರಕಾರಿಗಳನ್ನು ಬೆಳೆಸುವುದರ ಬಗ್ಗೆ ಈ ಬಳಗ ಜಾಗೃತಿ ಮೂಡಿಸುತ್ತಿದೆ.
ಈ ಶಿಬಿರದಲ್ಲಿ ದ.ಕ.ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್ ಉದ್ಘಾಟಕರಾಗಿ ಭಾಗವಹಿಸಲಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.ಅತಿಥಿ ಗಳಾಗಿ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಎಚ್.ಆರ್. ನಾಯಕ್.ಮಂಗಳೂರು ಸಾವಯವ ಕೃಷಿಕ ಗ್ರಾಹಕ ಬಳಗ ಅಧ್ಯಕ್ಷರು ಜಿ ಆರ್ ಪ್ರಸಾದ್, ಸಂಪನ್ಮೂಲ ವ್ಯಕ್ತಿ ಶ್ರೀ ಹರಿಕೃಷ್ಣ ಕಾಮತ್ ಪುತ್ತೂರು. ಭಾಗವಹಿಸಲಿದ್ದಾರೆ ಎಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.