News Karnataka Kannada
Tuesday, April 30 2024
ಮಂಗಳೂರು

ಮಂಗಳೂರು: ಜು.22ರಂದು ಸಾವಯವ ಕೈತೋಟ,ಟೆರೇಸ್ ಗಾರ್ಡನ್ ಬಗ್ಗೆ ತರಬೇತಿ ಶಿಬಿರ

On Jan. 7 and 8, a plant fair will be held at Kille Maidan in Puttur.
Photo Credit : Pixabay

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರಸಂಘ ಮತ್ತುಸಾವಯವ ಕೃಷಿ ಕ ಬಳಗ ಮಂಗಳೂರು ಇದರ ಸಹಯೋಗದಲ್ಲಿ ಸಾವಯವ ಕೈತೋಟ ,ಟೆರೇಸ್ ಗಾರ್ಡನ್ ತರಬೇತಿ ಶಿಬಿರ ಜುಲೈ 22 ರಂದು ಪೂರ್ವಾಹ್ನ 11ಗಂಟೆಗೆ ನಗರದ ಪತ್ರಿಕಾಭವನ ( ಲೇಡಿ ಹಿಲ್  ಊರ್ವ ಮಾರುಕಟ್ಟೆ ರಸ್ತೆ)ದಲ್ಲಿ ನಡೆಯಲಿದೆ.

ನಮ್ಮ ಮನೆಯಂಗಳದಲ್ಲಿ, ಸಣ್ಣ ಬಾಲ್ಕನಿಯಲ್ಲಿ ತರಕಾರಿ, ಹೂವು ಬೆಳೆಯುವುದು ಹೇಗೆ ಎಂಬುದನ್ನು  ಈ ಶಿಬಿರದಲ್ಲಿ ಮಂಗಳೂರು ಸಾವಯವ ಕೃಷಿಕ ಗ್ರಾಹಕ ಬಳಗ ಕೈತೋಟ ಕ್ರಾಂತಿ ಎಂಬ ಯೋಜನೆಯಡಿ ತರಬೇತಿ ನೀಡಲಿದ್ದಾರೆ. ನಗರದ ಮನೆಮನೆಯಲ್ಲಿ ಸಾವಯವ ಪದ್ಧತಿಯಲ್ಲಿ ಕಾಲಮಾನಗಳ ಹೂವು ಮತ್ತು ತರಕಾರಿಗಳನ್ನು ಬೆಳೆಸುವುದರ ಬಗ್ಗೆ ಈ ಬಳಗ  ಜಾಗೃತಿ ಮೂಡಿಸುತ್ತಿದೆ.

ಈ ಶಿಬಿರದಲ್ಲಿ ದ.ಕ.ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್ ಉದ್ಘಾಟಕರಾಗಿ ಭಾಗವಹಿಸಲಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.ಅತಿಥಿ ಗಳಾಗಿ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಎಚ್.ಆರ್. ನಾಯಕ್.ಮಂಗಳೂರು ಸಾವಯವ ಕೃಷಿಕ ಗ್ರಾಹಕ ಬಳಗ ಅಧ್ಯಕ್ಷರು ಜಿ ಆರ್ ಪ್ರಸಾದ್, ಸಂಪನ್ಮೂಲ ವ್ಯಕ್ತಿ ಶ್ರೀ ಹರಿಕೃಷ್ಣ ಕಾಮತ್ ಪುತ್ತೂರು. ಭಾಗವಹಿಸಲಿದ್ದಾರೆ ಎಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು