Categories: ಮಂಗಳೂರು

ಮಂಗಳೂರು: ಜೂನ್ 21 ರಂದು ‘ಟ್ರಾನ್ಸೆಂಡಿಂಗ್ ಬೌಂಡ್ರೀಸ್’ ಸಂಗೀತ ಕಾರ್ಯಕ್ರಮ

ಮಂಗಳೂರು: ವಿಶ್ವ ಸಂಗೀತ ದಿನ ಅಂಗವಾಗಿ ಜೂನ್ 21 ರಂದು ಟ್ರಾನ್ಸೆಂಡಿಂಗ್ ಬೌಂಡ್ರೀಸ್ ( ಗಡಿಗಳನ್ನು ಮೀರಿದ )ಎಂಬ ವಿಶಿಷ್ಟ ಸಂಗೀತ ಕಾರ್ಯಕ್ರಮವನ್ನು ಮಾಂಡ್ ಸೋಬಾನ ವತಿಯಿಂದ ಆಯೋಜಿಸಲಾಗಿದೆ .

ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಮಾಂಡ್ ಸೊಭಾಣ್ ಗುರಿಕಾರ ಎರಿಕ್ ಒಝೇರಿಯೊ ವಿಶೇಷ ಕಾರ್ಯಕ್ರಮದಲ್ಲಿ ಕೆನಡದ ಬ್ರಿಟಿಶ್ ಕೊಲಂಬಿಯ ವಿಶ್ವವಿದ್ಯಾಲಯ ನಿಲಯದಲ್ಲಿ ಮೆಟೀರಿಯಲ್ಸ್ ಇಂಜಿನಿಯರಿಂಗ್ ಅಧ್ಯಯನ ಮಾಡುತ್ತಿರುವ ಇಶಾನ್ ಫೆರ್ನಾಂಡಿಸ್ ಹನ್ನೆರಡು ಭಾಷೆಗಳಲ್ಲಿ ಹನ್ನೆರಡು ಹಾಡುಗಳನ್ನು ಹಾಡಲಿದ್ದಾರೆ ಎಂದು ತಿಳಿಸಿದರು .

ಈ 90ನಿಮಿಷಗಳ ಸಂಗೀತ ಕಚೇರಿ ಶಕ್ತಿನಗರದ ಕಲಾಂಗಣ್ ನಲ್ಲಿ ಸಂಜೆ 6ಮೂವತ್ತು ಕ್ಕೆ ಪ್ರಾರಂಭವಾಗಲಿದ್ದು ಸಾರ್ವಜನಿಕರಿಗೆ ಉಚಿತ ಪ್ರವೇಶವನ್ನು ಕಲ್ಪಿಸಲಾಗಿದೆ ಎಂದು ಅವರು ಹೇಳಿದರು .ಇಶಾನ್ ಫೆರ್ನಾಂಡಿಸ್ ಮಂಗಳೂರು ಕೊಂಕಣಿ ಯವರಾಗಿದ್ದು ಗಿಟಾರ್ ಮಾಂತ್ರಿಕ ಆಲ್ವಿನ್ ಫರ್ನಾಂಡಿಸ್ ಅವರ ಮಗ ಹಾಗೂ ಮಾಂಡ್ ಸೊಭಾಣ್ ಗುರಿಕಾರ ಎರಿಕ್ ಒಝೇರಿಯೊ ಅವರ ಮೊಮ್ಮಗನಾಗಿದ್ದಾರೆ.

ಈ ಕಾರ್ಯಕ್ರಮದಲ್ಲಿ ಇಶಾಮ್ ಫೆರ್ನಾಂಡಿಸ್ ಅವರ ತಂದೆ ಆಲ್ವಿನ್ ಫರ್ನಾಂಡಿಸ್ ಗಿಟಾರ್ ಸ್ಟೀಫನ್ ಫ್ರ್ಯಾಂಕ್ ಪಿಯಾನೋ ಮತ್ತು ಮೆಲ್ವಿನ್ ಫೆರ್ನಾಂಡಿಸ್ ತಾಳವಾದ್ಯದಲ್ಲಿ ಜೊತೆಯಾಗಲಿದ್ದಾರೆ . ಡಾಕ್ಟರ್ ರವಿಶಂಕರ ರಾವ್ ಕಾರ್ಯಕ್ರಮ ನಿರೂಪಿಸಲಿದ್ದಾರೆ ಖ್ಯಾತ ವರ್ಣಚಿತ್ರ ಕಲಾವಿದ ವಿಲ್ಲನ್ ಸೋಜಾ ಕ್ಯಾನ್ವಾಸ್ ನಲ್ಲಿ ಹಾಡುಗಳನ್ನು ಸೆರೆಹಿಡಿಯಲಿದ್ದಾರೆ .

ಪ್ರದರ್ಶನದ ಕೊನೆಯಲ್ಲಿ ವರ್ಣಚಿತ್ರಗಳನ್ನು ಹರಾಜು ಮಾಡಲಾಗುತ್ತದೆ ಪ್ರದರ್ಶಕ ಇಶಾನ್ ಫೆರ್ನಾಂಡಿಸ್ , ಸಂಘಟಕ ಸ್ಟ್ಯಾನಿ ಅಲ್ವಾರಿಸ್ ,ಸಂಪರ್ಕಾಧಿಕಾರಿ ವಿಕ್ಟರ್ ಮಥಾಯಸ್ ,ಮಾಧ್ಯಮ ಸಂಯೋಜಕ ಟೈಟಸ್ ನೊರೊನ್ಹಾ ಉಪಸ್ಥಿತರಿದ್ದರು.

Ashika S

Recent Posts

ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಜಿಲ್ಲೆಯ 5ನೇ ಸಿವಿಲ್ ಕೋರ್ಟ್‌ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…

3 mins ago

ಕೇರಳದಲ್ಲಿ ಭಾರೀ ಮಳೆ : ರೆಡ್ ಅಲರ್ಟ್ ಘೋಷಣೆ

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…

19 mins ago

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

41 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

1 hour ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

3 hours ago