ಮಂಗಳೂರು: ಕುಡಿದ ಮತ್ತಿನಲ್ಲಿ ರೈಲಿನಲ್ಲಿ ಕತ್ತಿ ಬೀಸಿ ದಾಂಧಲೆ ನಡೆಸಿದ ಇಬ್ಬರನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜೂನ್ 30 ರಂದು ಶುಕ್ರವಾರ ದಾದರ್ನಿಂದ ತಿರುನಲ್ವೇಲಿಗೆ ತೆರಳುತ್ತಿದ್ದ ರೈಲು ಸಂಖ್ಯೆ 22629 ರಲ್ಲಿ ಈ ಘಟನೆ ಘಟನೆ ನಡೆದಿದ್ದು, ಗೋವಾದಿಂದ ತಿರುನಲ್ವೇಲಿಗೆ ಪ್ರಯಾಣಿಸುತ್ತಿದ್ದ ತಮಿಳುನಾಡಿನ ಜಯಪ್ರಭು ಮತ್ತು ಪ್ರಸಾದ್ ಎಂಬುವರು ಸುರತ್ಕಲ್ ಮತ್ತು ತೋಕೂರು ರೈಲ್ವೆ ಹಳಿಗಳ ನಡುವೆ ಕತ್ತಿ ಬೀಸತೊಡಗಿದ್ದರು. ಘಟನೆಯಿಂದ ಬೆಚ್ಚಿದ ಪ್ರಯಾಣಿಕರು ಎಸ್ 7 ರಿಸರ್ವೇಶನ್ ಕಂಪಾರ್ಟ್ಮೆಂಟ್ನಿಂದ ಜನರಲ್ ಕಂಪಾರ್ಟ್ಮೆಂಟ್ ಕಡೆಗೆ ಓಡಿದ್ದಾರೆ.
ಈ ನಡುವೆ ರಿಸ್ಕ್ ತೆಗೆದುಕೊಂಡು ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ್ (ಟಿಟಿಇ) ಬಾಬು ಕೆ, ಶ್ರೀನಿವಾಸ್ ಶೆಟ್ಟಿ ಮತ್ತು ತಿಮ್ಮಪ್ಪ ಗೌಡ ಅವರು ಇಬ್ಬರು ವ್ಯಕ್ತಿಗಳ ಕೈಯಿಂದ ಕತ್ತಿಗಳನ್ನು ತೆಗೆದುಕೊಂಡು ಅವರಿಬ್ಬರನ್ನು ಹಿಡಿದಿಟ್ಟುಕೊಂಡಿದ್ದಾರೆ. ನಂತರ ಅವರನ್ನು ಮಂಗಳೂರಿನ ರೈಲ್ವೆ ಪೊಲೀಸರಿಗೆ ಹಸ್ತಾಂತರ ಮಾಡಲಾಗಿದೆ. ಘಟನೆಯಲ್ಲಿ ರೈಲಿನ ಸೀಟು ಕಿಟಕಿ ಗಾಜುಗಳಿಗೆ ಹಾನಿಯಾಗಿದೆ.