News Karnataka Kannada
Saturday, April 27 2024
ಮಂಗಳೂರು

ಮಂಗಳೂರು: ರೈಲಿನಲ್ಲಿ ಕತ್ತಿ ಬೀಸಿ ದಾಂಧಲೆ, ಇಬ್ಬರು ಅರೆಸ್ಟ್‌

ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ ಮೌಲ್ಯದ ಎರಡು ಲಾರಿ ಹಾಗೂ ಸಾವಿರಾರು ರೂಪಾಯಿ ಮೌಲ್ಯದ ಮರಳನ್ನು ಹಾಗೂ ನಾಲ್ಕು ಮಂದಿ ಆರೋಪಿಗಳನ್ನು ಬಂಟ್ವಾಳ ‌ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತ್ರತ್ವದ ಪೋಲೀಸ್ ತಂಡ ವಶಕ್ಕೆ ಪಡೆದುಕೊಂಡ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
Photo Credit : News Kannada

ಮಂಗಳೂರು: ಕುಡಿದ ಮತ್ತಿನಲ್ಲಿ ರೈಲಿನಲ್ಲಿ ಕತ್ತಿ ಬೀಸಿ ದಾಂಧಲೆ ನಡೆಸಿದ ಇಬ್ಬರನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜೂನ್ 30 ರಂದು ಶುಕ್ರವಾರ ದಾದರ್‌ನಿಂದ ತಿರುನಲ್ವೇಲಿಗೆ ತೆರಳುತ್ತಿದ್ದ ರೈಲು ಸಂಖ್ಯೆ 22629 ರಲ್ಲಿ ಈ ಘಟನೆ ಘಟನೆ ನಡೆದಿದ್ದು, ಗೋವಾದಿಂದ ತಿರುನಲ್ವೇಲಿಗೆ ಪ್ರಯಾಣಿಸುತ್ತಿದ್ದ ತಮಿಳುನಾಡಿನ ಜಯಪ್ರಭು ಮತ್ತು ಪ್ರಸಾದ್ ಎಂಬುವರು ಸುರತ್ಕಲ್ ಮತ್ತು ತೋಕೂರು ರೈಲ್ವೆ ಹಳಿಗಳ ನಡುವೆ ಕತ್ತಿ ಬೀಸತೊಡಗಿದ್ದರು. ಘಟನೆಯಿಂದ ಬೆಚ್ಚಿದ ಪ್ರಯಾಣಿಕರು ಎಸ್ 7 ರಿಸರ್ವೇಶನ್ ಕಂಪಾರ್ಟ್‌ಮೆಂಟ್‌ನಿಂದ ಜನರಲ್ ಕಂಪಾರ್ಟ್‌ಮೆಂಟ್ ಕಡೆಗೆ ಓಡಿದ್ದಾರೆ.

ಈ ನಡುವೆ ರಿಸ್ಕ್ ತೆಗೆದುಕೊಂಡು ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ್ (ಟಿಟಿಇ) ಬಾಬು ಕೆ, ಶ್ರೀನಿವಾಸ್ ಶೆಟ್ಟಿ ಮತ್ತು ತಿಮ್ಮಪ್ಪ ಗೌಡ ಅವರು ಇಬ್ಬರು ವ್ಯಕ್ತಿಗಳ ಕೈಯಿಂದ ಕತ್ತಿಗಳನ್ನು ತೆಗೆದುಕೊಂಡು ಅವರಿಬ್ಬರನ್ನು ಹಿಡಿದಿಟ್ಟುಕೊಂಡಿದ್ದಾರೆ. ನಂತರ ಅವರನ್ನು ಮಂಗಳೂರಿನ ರೈಲ್ವೆ ಪೊಲೀಸರಿಗೆ ಹಸ್ತಾಂತರ ಮಾಡಲಾಗಿದೆ. ಘಟನೆಯಲ್ಲಿ ರೈಲಿನ ಸೀಟು ಕಿಟಕಿ ಗಾಜುಗಳಿಗೆ ಹಾನಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು