ಮಂಗಳೂರು: ಬಜಪೆ ಠಾಣಾ ವ್ಯಾಪ್ತಿಯ ಬಡಗ ಎಡಪದವು ಗ್ರಾಮದ ದಡ್ಡಿ ಎಂಬಲ್ಲಿ ಆ. 14ರಂದು ರಾತ್ರಿ ಕಳ್ಳತನ ಮಾಡಿದ ಮೂರು ದನಗಳ ವಿರುದ್ಧ ಗೋಹತ್ಯಾ ನಿಷೇಧ ಕಾಯ್ದೆಯಂತೆ ದಾಖಲಾದ ದೂರಿನಂತೆ ಬಜಪೆ ಪೊಲೀಸರು ಆ. 19 ರಂದು ಕಾರ್ಯಾಚರಣೆ ನಡೆಸಿ ಇಬ್ಬರು ದನಗಳ್ಳರನ್ನು ಬಂಧಿಸಿದ್ದಾರೆ.
ಉಳ್ಳಾಲ ತಾಲೂಕಿನ ಇರ್ಫಾನ್ (30) ಮತ್ತು ಬಂಟ್ವಾಳ ತಾಲೂಕಿನ ಮೊಹಮ್ಮದ್ ಆರಿಫ್ (32) ಬಂಧಿತರು. ಬಂಧಿತರಿಂದ 5 ಲಕ್ಷ ರೂ. ಮೌಲ್ಯದ ಮಾರುತಿ ಸ್ವಿಫ್ಟ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ.