News Karnataka Kannada
Sunday, April 28 2024
ಮಂಗಳೂರು

ಮಂಗಳೂರು: ಲಾರಿಗಳ ನಡುವೆ ಭೀಕರ ಅಪಘಾತ, ಇಬ್ಬರು ಚಾಲಕರ ದುರ್ಮರಣ

Two drivers killed in road accident between trucks
Photo Credit : News Kannada

ಮಂಗಳೂರು: ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿ ಚಾಲಕರಿಬ್ಬರು ಮೃತಪಟ್ಟ ಘಟನೆ ನಗರದ ಹೊರವಲಯದ ಗುರುಪುರ ಕೈಕಂಬ ಬಳಿಯ ಇಳಿಜಾರು ಪ್ರದೇಶದಲ್ಲಿ ನಡೆದಿದೆ.

ಮೂಡಬಿದ್ರೆ ಕಡೆಯಿಂದ ಮಣ್ಣು ಹೊತ್ತು ಬರುತ್ತಿದ್ದ ಬೃಹತ್ ಲಾರಿ ಹಾಗು ಗುರುಪುರ ಕಡೆಯಿಂದ ಹೋಗುತ್ತಿದ್ದ ಲಾರಿ ನಡುವೆ ಇಳಿಜಾರು ಪ್ರದೇಶದಲ್ಲಿ ಅಪಘಾತ ಸಂಭವಿಸಿದ್ದು ಅಪಘಾತದ ತೀವ್ರತೆಗೆ ಎರಡು ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು ರಸ್ತೆ ಬದಿಯ ಹೊಂಡಕ್ಕೆ ಇಳಿದು ನಿಂತ ಪರಿಣಾಮ ಚಾಲಕನನ್ನು ಹೊರೆತೆಗೆಯಲು , ಹರಸಾಹಸ ಪಡಬೇಕಾಯಿತು.

ಸದ್ಯ ಓರ್ವನನ್ನು ಹೊರಕ್ಕೆ ತೆಗೆದು ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಮೃತಪಟ್ಟಿದ್ದು ಇನ್ನೋರ್ವ ಮೃತ ದೇಹ ಹೊರತೆಗೆಯಲು ಕಾರ್ಯಚರಣೆ ನಡೆಯುತ್ತಿದೆ.

ರಸ್ತೆ ತುಂಬೆಲ್ಲ ವಾಹನದ ಘಟನೆ ಹೆಚ್ಚಿದ್ದು ಸ್ಥಳದಲ್ಲಿ ಟ್ರಾಫಿಕ್ ನಿರ್ವಹಣೆ ನಡೆಸುತ್ತಿರುವುದು ಕಂಡುಬಂತು ಅಲ್ಲದೆ ಅಗಲ ಕಿರಿದಾದ ರಸ್ತೆಯಲ್ಲಿ ಸಂಚಾರಕ್ಕೆ ರಾತ್ರಿ ಮಾತ್ರ ಅವಕಾಶ ಕಲ್ಪಿಸಿ ಕೊಡಬೇಕೆಂದು ಸ್ಥಳದಲ್ಲಿ ಸಾರ್ವಜನಿಕರು ಆಗ್ರಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು