Categories: ಮಂಗಳೂರು

ಮಂಗಳೂರು: ಲಾರಿಗಳ ನಡುವೆ ಭೀಕರ ಅಪಘಾತ, ಇಬ್ಬರು ಚಾಲಕರ ದುರ್ಮರಣ

ಮಂಗಳೂರು: ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿ ಚಾಲಕರಿಬ್ಬರು ಮೃತಪಟ್ಟ ಘಟನೆ ನಗರದ ಹೊರವಲಯದ ಗುರುಪುರ ಕೈಕಂಬ ಬಳಿಯ ಇಳಿಜಾರು ಪ್ರದೇಶದಲ್ಲಿ ನಡೆದಿದೆ.

ಮೂಡಬಿದ್ರೆ ಕಡೆಯಿಂದ ಮಣ್ಣು ಹೊತ್ತು ಬರುತ್ತಿದ್ದ ಬೃಹತ್ ಲಾರಿ ಹಾಗು ಗುರುಪುರ ಕಡೆಯಿಂದ ಹೋಗುತ್ತಿದ್ದ ಲಾರಿ ನಡುವೆ ಇಳಿಜಾರು ಪ್ರದೇಶದಲ್ಲಿ ಅಪಘಾತ ಸಂಭವಿಸಿದ್ದು ಅಪಘಾತದ ತೀವ್ರತೆಗೆ ಎರಡು ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು ರಸ್ತೆ ಬದಿಯ ಹೊಂಡಕ್ಕೆ ಇಳಿದು ನಿಂತ ಪರಿಣಾಮ ಚಾಲಕನನ್ನು ಹೊರೆತೆಗೆಯಲು , ಹರಸಾಹಸ ಪಡಬೇಕಾಯಿತು.

ಸದ್ಯ ಓರ್ವನನ್ನು ಹೊರಕ್ಕೆ ತೆಗೆದು ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಮೃತಪಟ್ಟಿದ್ದು ಇನ್ನೋರ್ವ ಮೃತ ದೇಹ ಹೊರತೆಗೆಯಲು ಕಾರ್ಯಚರಣೆ ನಡೆಯುತ್ತಿದೆ.

ರಸ್ತೆ ತುಂಬೆಲ್ಲ ವಾಹನದ ಘಟನೆ ಹೆಚ್ಚಿದ್ದು ಸ್ಥಳದಲ್ಲಿ ಟ್ರಾಫಿಕ್ ನಿರ್ವಹಣೆ ನಡೆಸುತ್ತಿರುವುದು ಕಂಡುಬಂತು ಅಲ್ಲದೆ ಅಗಲ ಕಿರಿದಾದ ರಸ್ತೆಯಲ್ಲಿ ಸಂಚಾರಕ್ಕೆ ರಾತ್ರಿ ಮಾತ್ರ ಅವಕಾಶ ಕಲ್ಪಿಸಿ ಕೊಡಬೇಕೆಂದು ಸ್ಥಳದಲ್ಲಿ ಸಾರ್ವಜನಿಕರು ಆಗ್ರಹಿಸಿದರು.

Ashika S

Recent Posts

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

15 mins ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

33 mins ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

47 mins ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

58 mins ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

1 hour ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

2 hours ago