News Karnataka Kannada
Friday, May 03 2024
ಮಂಗಳೂರು

ಮಂಗಳೂರು: ಕರ್ತವ್ಯಕ್ಕೆ ತೆರಳಿದ್ದ ಇಬ್ಬರು ಪೊಲೀಸರ ಮೇಲೆ ದಾಳಿ ನಡೆಸಿದ ತಂಡ

Mng (1)
Photo Credit : News Kannada

ಮಂಗಳೂರು: ನಗರದ ಉರ್ವ ಚಿಲಿಂಬಿಗುಡ್ಡೆ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ಬೀಟ್ ಕರ್ತವ್ಯಕ್ಕೆ ತೆರಳಿದ್ದ ಇಬ್ಬರು ಪೊಲೀಸರ ಮೇಲೆ ತಂಡವೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ರವಿವಾರ ತಡರಾತ್ರಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.

ಚಿಲಿಂಬಿಗುಡ್ಡೆ ನಿವಾಸಿಗಳಾದ ದುರ್ಗೇಶ್, ಪ್ರಜ್ವಿತ್, ರಕ್ಷಿತ್ ಬಂಧಿತರು. ಆರೋಪಿಗಳು ಶ್ರೀರಾಮ ಸೇನೆಯ ಕಾರ್ಯಕರ್ತರು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಪೊಲೀಸ್‌ ಸಿಬ್ಬಂದಿ ವೆಂಕಟೇಶ್ ಮತ್ತು ಧನಂಜಯ್ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉರ್ವ ಪೊಲೀಸ್ ಠಾಣೆಯ ಸಿಬ್ಬಂದಿ ತಡರಾತ್ರಿ 1.30ರ ವೇಳೆಗೆ ಚಿಲಿಂಬಿಗುಡ್ಡೆ ವ್ಯಾಪ್ತಿಯಲ್ಲಿ ಗಸ್ತು ತಿರುಗುತ್ತಿದ್ದರು. ಈ ವೇಳೆ ಸಂಘಟನೆಯೊಂದಕ್ಕೆ ಸೇರಿದ ಸುಮಾರು 8 ಮಂದಿ ಯುವಕರ ತಂಡ ರಸ್ತೆ ಬದಿ ಮದ್ಯಪಾನ ಮಾಡುತ್ತಾ ಹರಟೆ ಹೊಡೆಯುತ್ತಿತ್ತು.

ಈ ಸಂದರ್ಭ ಪೊಲೀಸರು ವಿಚಾರಣೆ ನಡೆಸಿದ್ದು, ಇದರಿಂದ ತಗಾದೆ ತೆಗೆದ ಪಾನಮತ್ತ ಯುವಕರ ತಂಡ ಪೊಲೀಸರ ಮೇಲೆ ಹಲ್ಲೆ ನಡೆಸಿದೆ. ಇಬ್ಬರು ಪೊಲೀಸರಿಗೂ ತಂಡ ಹಲ್ಲೆ ಮಾಡಿದ್ದಲ್ಲದೆ, ಓರ್ವರ ಮೇಲೆ ಬೈಕ್ ಚಲಾಯಿಸಲು ಯತ್ನಿಸಿರುವುದಾಗಿ ಆರೋಪಿಸಲಾಗಿದೆ. ಬಳಿಕ ತಂಡ ಅಲ್ಲಿಂದ ಪರಾರಿಯಾಗಿದೆ.

ಗಾಯಾಳು ಪೊಲೀಸರನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆಗೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು