ಮಂಗಳೂರು: ನಗರದ ಜ್ಯೋತಿಯ ಅಂಬೇಡ್ಕರ್ ವೃತ್ತದ ಬಳಿ ಎರಡು ಖಾಸಗಿ ಬಸ್ ಗಳು ಪರಸ್ಪರ ಡಿಕ್ಕಿ ಹೊಡೆದಿವೆ.
ಹಂಪನಕಟ್ಟೆ ಕಡೆಯಿಂದ ಮೂಡುಶೆಡ್ಡೆಗೆ ತೆರಳುತ್ತಿದ್ದ ಬಸ್, ಬಂಟ್ಸ್ ಹಾಸ್ಟೆಲ್ ಕಡೆಯಿಂದ ಸ್ಟೇಟ್ ಬ್ಯಾಂಕ್ ಕಡೆಗೆ ಹೋಗುತ್ತಿದ್ದ ಬಸ್ ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.
ಒಂದು ಬಸ್ಸಿನ ಮುಂಭಾಗ ಮತ್ತು ಇನ್ನೊಂದು ಬಸ್ಸಿನ ಎಡಭಾಗಕ್ಕೆ ಹಾನಿಯಾಗಿದೆ. ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಪ್ರಕರಣ ದಾಖಲಿಸಿಕೊಂಡಿರುವ ಮಂಗಳೂರು ಸಂಚಾರ ಪೂರ್ವ ವಿಭಾಗದ ಪೊಲೀಸರು ತಿಳಿಸಿದ್ದಾರೆ.