News Karnataka Kannada
Sunday, April 28 2024
ಮಂಗಳೂರು

ಮಂಗಳೂರು: ಪ್ರಗತಿ ರಥಯಾತ್ರೆಗೆ ಚಾಲನೆ ನೀಡಿದ ವೇದವ್ಯಾಸ್ ಕಾಮತ್

Mangaluru: Vedavyas Kamath launches Pragati Rath Yatra
Photo Credit : News Kannada

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿ ರಥಯಾತ್ರೆಗೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಚಾಲನೆ ನೀಡಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಪ್ರಗತಿ ರಥ ಯಾತ್ರೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಗುರುದತ್ತ ನಾಯಕ್ ನೇತೃತ್ವದಲ್ಲಿ ಪ್ರಗತಿ ರಥ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಪ್ರತಿ ಗ್ರಾಮಗಳ ಪ್ರತಿಯೊಂದು ಬೂತ್‌ಗೆ ಸಂಚರಿಸಲಿದೆ. ಚುನಾವಣೆ ಘೋಷಣೆ ಆಗುವ ತನಕ ಈ ರಥ ಜಿಲ್ಲಾದ್ಯಂತ ಸಂಚರಿಸಲಿದ್ದು, ಕೇಂದ್ರ, ರಾಜ್ಯ ಸರಕಾರದ ಜನಪರ ಯೋಜನೆಯ, ಸಾಧನೆಯನ್ನು ಜನರ ಮನೆಮನಗಳಿಗೆ ತಿಳಿಸಲಿದೆ.

 

ಇದರ ಜೊತೆಗೆ ಜನರ ನಾಡಿಮಿಡಿತವನ್ನು ಅರಿತುಕೊಂಡು, ಬಿಜೆಪಿಯ ಚುನಾವಣೆಯ ಪ್ರಣಾಳಿಕೆಯಲ್ಲಿ ಏನನ್ನು ಸೇರಿಸಬೇಕು ಎಂಬ ಅಭಿಪ್ರಾಯವನ್ನು ಜನರಿಂದ ಪಡೆಯಲಾಗುವುದು ಎಂದು ಮಾಹಿತಿ ನೀಡಿದರು. ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಮಾತನಾಡಿ, ಪ್ರಗತಿ ರಥ ಯಾತ್ರೆಯ ಸಂದರ್ಭದಲ್ಲಿ ಕೇವಲ ಡಬಲ್ ಇಂಜಿನ್ ಸರಕಾರದ ಸಾಧನೆಯನ್ನು ಜನರಿಗೆ ತಿಳಿಸುವುದು ಮಾತ್ರವಲ್ಲದೆ, ಪ್ರತಿ ಬೂತ್‌ನಲ್ಲಿ ಸೇರುವ ಜನರಿಂದ ಸಲಹೆ, ಅವರ ಅಭಿಪ್ರಾಯವನ್ನು ಪಡೆದುಕೊಂಡು ಪ್ರಣಾಳಿಕೆಯಲ್ಲಿ ಸೇರಿಸಲು ಪಕ್ಷದ ರಾಜ್ಯಾಧ್ಯಕ್ಷರಿಗೆ ತಿಳಿಸಲಾಗುವುದು.

ಬಿಜೆಪಿಯ ಚುನಾವಣೆಯ ಪ್ರಣಾಳಿಕೆ ಪಕ್ಷದ ಕೇವಲ ನಾಲೈದು ಜನರು ಕುಳಿತು ಮಾಡುವಂಥದ್ದಲ್ಲ, ಜನರ ಅಭಿಪ್ರಾಯಗಳಿಗೆ ಪ್ರಣಾಳಿಕೆಯಲ್ಲಿ ಆದ್ಯತೆ ನೀಡಲಾಗುವುದು ಎಂದು ಹೇಳಿದರು. ಮನಪಾ ಮೇಯರ್‌ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ ಪ್ರಗತಿ ರಥದ ರಾಜ್ಯದ ಸಹ ಸಂಚಾಲಕ ಪ್ರೇಮಾನಂದ ಶೆಟ್ಟಿ, ಧುರೀಣರಾದ ವಿಜಯ ಕುಮಾರ್ ಶೆಟ್ಟಿ, ಸುದೀಪ್ ಶೆಟ್ಟಿ, ಈಶ್ವರ ಕಟೀಲ್ ಮತ್ತಿತರರು ಉಪಸ್ಥಿತರಿದ್ದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು