ಮಂಗಳೂರು: ಪ್ರಗತಿ ರಥಯಾತ್ರೆಗೆ ಚಾಲನೆ ನೀಡಿದ ವೇದವ್ಯಾಸ್ ಕಾಮತ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿ ರಥಯಾತ್ರೆಗೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಚಾಲನೆ ನೀಡಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಪ್ರಗತಿ ರಥ ಯಾತ್ರೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಗುರುದತ್ತ ನಾಯಕ್ ನೇತೃತ್ವದಲ್ಲಿ ಪ್ರಗತಿ ರಥ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಪ್ರತಿ ಗ್ರಾಮಗಳ ಪ್ರತಿಯೊಂದು ಬೂತ್‌ಗೆ ಸಂಚರಿಸಲಿದೆ. ಚುನಾವಣೆ ಘೋಷಣೆ ಆಗುವ ತನಕ ಈ ರಥ ಜಿಲ್ಲಾದ್ಯಂತ ಸಂಚರಿಸಲಿದ್ದು, ಕೇಂದ್ರ, ರಾಜ್ಯ ಸರಕಾರದ ಜನಪರ ಯೋಜನೆಯ, ಸಾಧನೆಯನ್ನು ಜನರ ಮನೆಮನಗಳಿಗೆ ತಿಳಿಸಲಿದೆ.

 

ಇದರ ಜೊತೆಗೆ ಜನರ ನಾಡಿಮಿಡಿತವನ್ನು ಅರಿತುಕೊಂಡು, ಬಿಜೆಪಿಯ ಚುನಾವಣೆಯ ಪ್ರಣಾಳಿಕೆಯಲ್ಲಿ ಏನನ್ನು ಸೇರಿಸಬೇಕು ಎಂಬ ಅಭಿಪ್ರಾಯವನ್ನು ಜನರಿಂದ ಪಡೆಯಲಾಗುವುದು ಎಂದು ಮಾಹಿತಿ ನೀಡಿದರು. ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಮಾತನಾಡಿ, ಪ್ರಗತಿ ರಥ ಯಾತ್ರೆಯ ಸಂದರ್ಭದಲ್ಲಿ ಕೇವಲ ಡಬಲ್ ಇಂಜಿನ್ ಸರಕಾರದ ಸಾಧನೆಯನ್ನು ಜನರಿಗೆ ತಿಳಿಸುವುದು ಮಾತ್ರವಲ್ಲದೆ, ಪ್ರತಿ ಬೂತ್‌ನಲ್ಲಿ ಸೇರುವ ಜನರಿಂದ ಸಲಹೆ, ಅವರ ಅಭಿಪ್ರಾಯವನ್ನು ಪಡೆದುಕೊಂಡು ಪ್ರಣಾಳಿಕೆಯಲ್ಲಿ ಸೇರಿಸಲು ಪಕ್ಷದ ರಾಜ್ಯಾಧ್ಯಕ್ಷರಿಗೆ ತಿಳಿಸಲಾಗುವುದು.

ಬಿಜೆಪಿಯ ಚುನಾವಣೆಯ ಪ್ರಣಾಳಿಕೆ ಪಕ್ಷದ ಕೇವಲ ನಾಲೈದು ಜನರು ಕುಳಿತು ಮಾಡುವಂಥದ್ದಲ್ಲ, ಜನರ ಅಭಿಪ್ರಾಯಗಳಿಗೆ ಪ್ರಣಾಳಿಕೆಯಲ್ಲಿ ಆದ್ಯತೆ ನೀಡಲಾಗುವುದು ಎಂದು ಹೇಳಿದರು. ಮನಪಾ ಮೇಯರ್‌ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ ಪ್ರಗತಿ ರಥದ ರಾಜ್ಯದ ಸಹ ಸಂಚಾಲಕ ಪ್ರೇಮಾನಂದ ಶೆಟ್ಟಿ, ಧುರೀಣರಾದ ವಿಜಯ ಕುಮಾರ್ ಶೆಟ್ಟಿ, ಸುದೀಪ್ ಶೆಟ್ಟಿ, ಈಶ್ವರ ಕಟೀಲ್ ಮತ್ತಿತರರು ಉಪಸ್ಥಿತರಿದ್ದರು

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

3 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

4 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

6 hours ago