News Karnataka Kannada
Sunday, April 28 2024
ಮಂಗಳೂರು

ಮಂಗಳೂರು: ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತಯಾಚನೆ ನಡೆಸಿದ ವೇದವ್ಯಾಸ್ ಕಾಮತ್

Vedavyas Kamath, who campaigned for votes in the South assembly constituency limits
Photo Credit : News Kannada

ಮಂಗಳೂರು: ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಅತ್ತಾವರ, ಜಪ್ಪಿನಮೊಗರು, ನಾಗುರಿ, ಎಕ್ಕೂರು ಪರಿಸರಕ್ಕೆ ತೆರಳಿ ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ್ ಕಾಮತ್ ಅವರು ಮತಯಾಚಿಸಿದರು.

“ಬಿಜೆಪಿಯ ಗೆಲುವಿನ ಓಟಕ್ಕೆ ಮತದಾರ ಪ್ರಭುಗಳು ನೀಡುತ್ತಿರುವ ಆಶೀರ್ವಾದವೇ ದೊಡ್ಡ ಶಕ್ತಿ. ಜನರ ಮನಸ್ಸು ಈಗಾಗಲೇ ಬಿಜೆಪಿ ಪರ ಇರುವುದು ಅತ್ಯಂತ ಸ್ಪಷ್ಟವಾಗಿ ಗೋಚರವಾಗುತ್ತಿದೆ. ಮನೆ ಮನೆಯ ಭೇಟಿ ಸಂದರ್ಭದಲ್ಲಿ ಬೂತ್ ಮಟ್ಟದ ಕಾರ್ಯಕರ್ತರು ಪ್ರತೀ ಮನೆಯವರೊಂದಿಗೆ ಇಟ್ಟುಕೊಂಡಿರುವ ಆತ್ಮೀಯ ಸಂಪರ್ಕವು, ಬಿಜೆಪಿ ಸರ್ಕಾರದ ಯೋಜನೆಗಳು ಮನೆ ಮನೆಗೆ ತಲುಪುವಲ್ಲಿ ಸಹಕಾರಿಯಾಗಿವೆ.  ಈ ಬಾರಿಯೂ ಕ್ಷೇತ್ರದಲ್ಲಿ ಕಮಲ ಅರಳುವುದು ಶತಃಸಿದ್ಧ” ಎಂದು ವಿಶ್ವಾಸದಿಂದ ನುಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರ ಜೊತೆಗೆ ಪರಿಸರದ ಹಿರಿಯರು, ಯುವಕರು, ಮಹಿಳೆಯರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು