ಮಂಗಳೂರು

ಮಂಗಳೂರು: ಬಾಳಿಗಾ ಸಾವಿಗೆ ನ್ಯಾಯ ನೀಡಲಾಗದ ಪರಿಣಾಮವನ್ನು ಎದುರಿಸಲಿದ್ದಾರೆ- ಸಂತೋಷ್ ಬಜಾಲ್

ಮಂಗಳೂರು:  ವೆಂಕಟರಮಣ ದೇವರ ಭಕ್ತ, ಜಿಎಸ್ ಬಿ ಸಮುದಾಯದ ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಸಾವಿಗೆ ನ್ಯಾಯ ಒದಗಿಸಲಾಗದ ಪರಿಣಾಮವನ್ನು ಈ ಬಾರಿಯ ಚುನಾವಣೆಯಲ್ಲಿ ಮಂಗಳೂರು‌ ನಗರ ದಕ್ಷಿಣ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತರು ಎದುರಿಸಲಿದ್ದಾರೆ ಎಂದು ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ರವರು ಹೇಳಿದರು.

ಬೆಂಗರೆಯಲ್ಲಿ ಡಿವೈಎಫ್ಐ ನೇತೃತ್ವದಲ್ಲಿ ನಡೆದ ಯುವಜನ ಸಮಾವೇಶವನ್ನು ಉದ್ಘಾಟಿಸಿ ಮತಾನಾಡುತ್ತ  ಗ್ರಾಮ ಪಂಚಾಯಿತಿಯಿಂದ ಕೇಂದ್ರ ಸರಕಾರದವರೆಗೂ ನಮ್ಮನ್ನಾಳುವ ಬಿಜೆಪಿ ಸರಕಾರ ಯುವಜನರ ಯಾವೊಂದು ಆಶೋತ್ತರಗಳನ್ನು ಈಡೇರಿಸಲಿಲ್ಲ. ವರುಷಕ್ಕೆರಡು ಕೋಟಿ ಉದ್ಯೋಗವನ್ನು ಸೃಷ್ಟಿಸುವ ಬದಲು ಇರುವ ಉದ್ಯೋಗಗಳನ್ನು ಕಳೆದುಕೊಳ್ಳುವಂತಾಗಿದೆ. ಉದ್ಯೋಗ ಇಲ್ಲದೆ ಕಂಗಾಲಾಗಿರುವ ಯುವಜನತೆ ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಅಕ್ರಮ ದಂಧೆಗಳನ್ನು ನಡೆಸುವ ಕ್ರಿಮಿನಲ್ ಗಳಾಗಿ ಪರಿವರ್ತನೆಗೊಂಡಿದ್ದಾರೆ.

ನಗರ ದಕ್ಷಿ ಣದ ಶಾಸಕ ವೇದವ್ಯಾಸ ಕಾಮತರ ಹಿಂಬಾಲಕರೆಲ್ಲರು ಜೂಜು ಕೇಂದ್ರಗಳನ್ನು, ಜುಗಾರಿ ಅಡ್ಡೆಗಳನ್ನು, ಅಕ್ರಮ ಮರಳುಗಾರಿಕೆಗಳನ್ನು , ಬೆಟ್ಟಿಂಗ್ ದಂಧೆ ನಡೆಸುವಂತಹ ತಲೆಹಿಡುಕರೆಂದು ಗಮನಿಸಬಹುದು. ದುಡಿದು ತಿನ್ನುವ ಬಡವರ ಗಳಿಕೆಯನ್ನು ನುಂಗುವ ಗ್ಯಾಂಬ್ಲರ್ ಗಳನ್ನು , ಉದ್ಯೋಗವಿಲ್ಲದೆ ಬೆಳೆದು ನಿಂತಿರುವ ಮನೆಯ ಯುವಕರನ್ನು ಹಾಳು ಮಾಡುವ ಇಂತಹ ಕ್ರಿಮಿನಲ್ ಗಳನ್ನು ಮಟ್ಟಹಾಕಬೇಕಾದರೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕೆಂದು ಕರೆ ನೀಡಿದರು.

ವೇದಿಕೆಯಲ್ಲಿ ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ ಕೆ ಇಮ್ತಿಯಾಜ್, ಮಾಜಿ ರಾಜ್ಯಾಧ್ಯಕ್ಷರಾದ ಸುನಿಲ್ ಕುಮಾರ್ ಬಜಾಲ್, ಡಿವೈಎಫ್ಐ ನಾಯಕರಾದ ನವೀನ್ ಕೊಂಚಾಡಿ, ತಾಯ್ಯುಬ್ ಬೆಂಗ್ರೆ, ಹನೀಫ್,ನೌಶಾದ್ ರವರು ಉಪಸ್ಥಿತರಿದ್ದರು.

Sushma K

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

6 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

6 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

7 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

7 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

7 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

7 hours ago