ಮಂಗಳೂರು: ಮಳಲಿ ಮಸೀದಿ ಕಮಿಟಿಯ ವಕ್ಫ್ ಆಸ್ತಿಯೆಂಬ ಅರ್ಜಿ ವಜಾ ಹಿನ್ನೆಲೆ, ಮಂಗಳೂರಿನಲ್ಲಿ ಮಾತನಾಡಿದ ವಿಎಚ್ ಪಿ ನಾಯಕ ಶರಣ್ ಪಂಪ್ವೆಲ್ ಅವರು ಇದು ಹಿಂದುಗಳಿಗೆ ಸಂದ ಜಯವೆಂದ ಹೇಳಿದ್ದಾರೆ.
ಅಲ್ಲಿ ದೇವಸ್ಥಾನದ ಚಿತ್ರಣ ಇದ್ದ ಕಾರಣಕ್ಕೆ ನವೀಕರಣಕ್ಕೆ ತಡೆ ತಂದಿದ್ದೆವು. 800 ವರ್ಷಗಳ ಹಿಂದಿನ ದೇವಸ್ಥಾನ, ಪುರಾತತ್ವ ಇಲಾಖೆಯಿಂದ ಸರ್ವೆ ನಡೆಸಲು ಕೋರಿದ್ದೆವು ಎಂದರು.
ಮಂಗಳೂರಿನ ಕೋರ್ಟ್ ತೀರ್ಪು ನೀಡಿದ್ದು ಮಸೀದಿ ಅರ್ಜಿಯನ್ನು ವಜಾ ಮಾಡಿದೆ. ನಮ್ಮ ಅಹವಾಲನ್ನು ಎತ್ತಿ ಹಿಡಿದಿದೆ, ದೇವಸ್ಥಾನ ಅನ್ನುವ ವಾದಕ್ಕೆ ಪುಷ್ಟಿ ಸಿಕ್ಕಿದೆ. ಆ ಜಾಗದಲ್ಲಿ ಬೃಹತ್ ದೇವಸ್ಥಾನ ನಿರ್ಮಾಣಕ್ಕೆ ತಯಾರಿ ನಡೆಸುತ್ತೇವೆ. ಅಷ್ಟಮಂಗಳ ಪ್ರಶ್ನೆ ಇಟ್ಟು ಮುಂದಿನ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.
ಮಂಗಳೂರು ಪೊಲೀಸ್ ಇಲಾಖೆಯಿಂದ ಮಸೀದಿ ವ್ಯಾಪ್ತಿಯಲ್ಲಿ ಬಂದೋಸ್ತ್ ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.