ಮಂಗಳೂರು: ಅಸೆಂಬ್ಲಿ ಚುನಾವಣೆಗೆ ಪೂರ್ವಭಾವಿಯಾಗಿ ಪಕ್ಷದ ಕಾರ್ಯಕರ್ತರು ಹಾಗೂ ಮತದಾರರ ಜಾಗೃತಿಗೆ ಕೇಂದ್ರ ಮತ್ತು ರಾಜ್ಯ ಸರಕಾರದ ಸಾಧನೆಗಳ ಬಗ್ಗೆ ಜನತೆಗೆ ಅರಿವು ಮೂಡಿಸಲು “ವಿಜಯ ಸಂಕಲ್ಪ ಯಾತ್ರೆ ಪ್ರಗತಿ ಯಾತ್ರೆ’ ಮಾ. 11ರಿಂದ 25ರ ವರೆಗೆ ದ.ಕ. ಜಿಲ್ಲೆಯಲ್ಲಿ ಸಂಚರಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಹೇಳಿದ್ದಾರೆ.
ದ.ಕ.ದಲ್ಲಿ ಮುಖಂಡರಾದ ಆರ್. ಅಶೋಕ್, ಮತ್ತು ಈಶ್ವರಪ್ಪ ಅವರ ನೇತೃತ್ವದಲ್ಲಿ ರಥಯಾತ್ರೆ ನಡೆಯಲಿದ್ದು, ಮಾ. 11ರಂದು ಸುಳ್ಯದಲ್ಲಿ ಬೆಳಗ್ಗೆ 10.30ಕ್ಕೆ ರೋಡ್ಶೋ ಇರಲಿದೆ. ಸಂಜೆ 5ಕ್ಕೆ ಪುತ್ತೂರಿಗೆ ಯಾತ್ರೆ ಆಗಮಿಸಲಿದ್ದು, ಸಾರ್ವಜನಿಕ ಸಭೆ ನಡೆಯಲಿದೆ ಎಂದು ನಗರದ ಅಟಲ್ ಸೇವಾ ಕೇಂದ್ರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಹೇಳಿದರು.