News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಮುಂದಿನ ಕೆಲ ತಿಂಗಳ ಕಾಲ ಪಕ್ಷದ ಗೆಲುವಿಗಾಗಿ ಒಟ್ಟಾಗಿ ಶ್ರಮಿಸೋಣ- ಶಾಸಕ ವೇದವ್ಯಾಸ್ ಕಾಮತ್

Veda
Photo Credit : News Kannada

ಪ್ರತಿ ಮನೆ ಮನೆಯಲ್ಲೂ ಸರಕಾರದ ಜನಪರ ಆಡಳಿತ, ಜನಪರ ಯೋಜನೆಗಳನ್ನು ತಲುಪಿಸುವ ಮೂಲಕ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವಲ್ಲಿ ಕಾರ್ಯೋನ್ಮುಖರಾಗುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಕರೆ ನೀಡಿದರು.

ಬೂತ್ ವಿಜಯ ಅಭಿಯಾನದಂಗವಾಗಿ ಮಂಗಳೂರು ಮಹಾನಗರ ಪಾಲಿಕೆಯ ವೆಲೆನ್ಸಿಯಾ ವಾರ್ಡಿನ 172ನೇ ಬೂತಿನಲ್ಲಿ ಕಾರ್ಯಕರ್ತರನ್ನು ಉದ್ಧೇಶಿಸಿ ಮಾತನಾಡಿದ ಅವರು, ಕಾರ್ಯಕರ್ತರೇ ಬಿಜೆಪಿಯ ಪ್ರಧಾನ ಶಕ್ತಿ. ನಮ್ಮ ಕಾರ್ಯಕರ್ತರು ಮನಸ್ಸು ಮಾಡಿದರೆ ರಾಜಕೀಯ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಬಲ್ಲರು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಇದು ಸುಮ್ಮನೆ ಕೂರುವ ಸಮಯವಲ್ಲ. ನಿರ್ದಿಷ್ಟ ಗುರಿಯೊಂದಿಗೆ ರಾಜ್ಯದಲ್ಲಿ ಪಕ್ಷವನ್ನು ಸ್ವತಂತ್ರವಾಗಿ ಆಡಳಿತಕ್ಕೆ ತರಲು ಬೂತ್ ಮಟ್ಟದಿಂದ ಸಂಘಟನೆಯನ್ನು ಬಲಪಡಿಸಬೇಕಿದೆ. ಚುನಾವಣಾ ಸಮರಾಂಗಣದಲ್ಲಿ ಗೆಲುವಿಗಾಗಿ ಹೋರಾಡುವ ಕಾಲ ಸನ್ನಿಹಿತವಾಗಿದ್ದು ಮುಂದಿನ ಕೆಲ ತಿಂಗಳ ಕಾಲ ಪಕ್ಷದ ಗೆಲುವಿಗಾಗಿ ಒಟ್ಟಾಗಿ ಶ್ರಮಿಸೋಣ ಎಂದು ಹೇಳಿದ್ದಾರೆ.

ಸಭೆಯಲ್ಲಿ ಸ್ಥಳೀಯ ಕಾರ್ಪೋರೇಟರ್ ಸಂದೀಪ್ ಗರೋಡಿ, ಶಕ್ತಿ ಕೇಂದ್ರ ಪ್ರಮುಖ್ ಜಗದೀಶ್ ‌ಶೆಟ್ಟಿ, ಮಂಡಲ ಪ್ರಮುಖರಾದ ಸುನಂದಾ, ಬೂತ್ ಅಧ್ಯಕ್ಷರಾದ ರೂಪೇಶ್ ಕಿರಣ್ ಹಾಗೂ ಬೂತ್ ಪ್ರಮುಖರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು