ಮಂಗಳೂರು: ಶುದ್ಧ ತುಳಸೀ ಮಾಲೆಯನ್ನು ಧರಿಸಿದರೆ ಯಾವುದೇ ಕೊರೊನ ಬರೂದಿಲ್ಲ ಎಂದು ಬಿಜೆಪಿ ಸಂಸದೆ ಸಾನ್ವಿ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದರು.
ಶಿವಮೊಗ್ಗದಲ್ಲಿ ಭಾನುವಾರ ನಡೆಯಲಿರುವ ಹಿಂದು ಜಾಗರಣ ಸಮಾವೇಶದಲ್ಲಿ ಭಾಗವಹಿಸಲಿರುವ ಅವರು ಶನಿವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ವೇಳೆ ಮಾತನಾಡಿದ ಅವರು, ಕೊರಳಿಗೆ ಹಾಕಿರುವ ತುಳಸೀ ಮಾಲೆಯಿಂದ ಔಷಧೀಯ ಗುಣಗಳು ಹುಟ್ಟುತ್ತವೆ. ಬೂಸ್ಟರ್ ಡೋಸನ್ನು ಅಗತ್ಯವಾಗಿ ಪಡೆದುಕೊಂಡು, ಪಾರಂಪರಿಕ ಔಷಧೀಯ ಪದ್ಧತಿಗಳನ್ನು ಅನುಸರಿಸಿದರೆ ಕೊರೊನಾಗೆ ಹೆದರಬೇಕಾಗಿಲ್ಲ ಎಂದರು.
ಸುರತ್ಕಲ್ ಶಾಸಕ ಭರತ್ ಶೆಟ್ಟಿ ಮತ್ತು ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಸಂಸದೆಗೆ ಸ್ವಾಗತ ಕೋರಿದರು.