ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ನ ಸ್ಥಾಪಕ ಅಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟರವರು ಮುಖ್ಯ ಪ್ರವರ್ತಕರಾಗಿ ಹಾಗೂ ಇತರೆ 14 ಮಂದಿ ಸಮಾನ ಮನಸ್ಕ ಪ್ರವರ್ತಕರೊಡಗೂಡಿ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಮುಂಭಾಗದಲ್ಲಿರುವ ತಾಜ್ ಟವರ್ನಲ್ಲಿ ಯಕ್ಷಧ್ರುವ ಸೌಹಾರ್ಧ ಕೋ-ಅಪರೇಟಿವ್ ಸೊಸೈಟಿಯನ್ನು ಪ್ರಾರಂಬಿಸಲು ಉದ್ದೇಶಿಸಿದ್ದು ಇದರ ಉದ್ಘಾಟನಾ ಸಮಾರಂಭವು ದಿನಾಂಕ 05-03-2023ರ ಆದಿತ್ಯವಾರ ಸಾಯಂಕಾಲ 5:00 ಗಂಟೆಗೆ ಒಡಿಯೂರು ಕ್ಷೇತ್ರದ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿರವರ ಶುಭಾರ್ಶಿವಾದದೊಂದಿಗೆ ಪಟ್ಟ ಫೌಂಡೇಶನಿನ ಗೌರವಾಧ್ಯಕ್ಷರಾದ ಕನ್ಯಾನ ಸದಾಶಿವ ಶೆಟ್ಟಿಯವರ ಅಮೃತ ಹಸ್ತದಲ್ಲಿ ನೆರವೇರಲಿದೆ.
ಪ್ರಸ್ತುತ ಸೊಸೈಟಿಯ ಕಾರ್ಯವ್ಯಾಪ್ತಿಯು ದಕ್ಷಿಣ ಕನ್ನಡ ಜಿಲ್ಲೆಯನ್ನು ಹೊಂದಿದ್ದು ಮುಂದಕ್ಕೆ ಇತರೆ ಜಿಲ್ಲೆಗಳಲ್ಲಿ ವಿಸ್ತರಿಸುವ ಸಂಕಲ್ಪವನ್ನು ಹೊಂದಲಾಗಿದೆ ಎಂದು ಮತ್ತು ಇತರ ಮಾಹಿತಿಯನ್ನ ಸಂಘಟಕರಾದ ಪಟ್ಲಾ ಸತೀಶ್ ಶೆಟ್ಟಿ ,ಪುರುಷೋತ್ತಮ್ ಭಂಡಾರಿ ,ಪತ್ರಿಕಾಗೋಷ್ಠಿಯಲ್ಲಿ ಮಾಹಿತಿಯನ್ನ ನೀಡಿದರು.
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…