ಮಂಗಳೂರು: ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠದಲ್ಲಿ ಇದೇ ನವೆಂಬರ್ 2 ನೇ ತಾರೀಕಿನಿಂದ 15 ದಿನಗಳ ಕಾಲ ಸಂಜೆ 6 ರಿಂದ 7.15 ರ ವರೆಗೆ ಯೋಗಾಸನ ಶಿಬಿರ ನಡೆಯಲಿದೆ.
ಯೋಗರತ್ನ ಶ್ರೀ ಗೋಪಾಲಕೃಷ್ಣ ದೇಲಂಪಾಡಿಯವರು ಯೋಗಾಸನ, ಮುದ್ರೆಗಳು, ಕ್ರಿಯೆಗಳು, ಪ್ರಾಣಾಯಾಮ, ಸೂರ್ಯನಮಸ್ಕಾರ, ಧ್ಯಾನ ಮಾಡುವ ವಿಧಾನ ತಿಳಿಸಿಕೊಡುವರು. ಆಸಕ್ತರು ತಮ್ಮ ಹೆಸರುಗಳನ್ನು ಆಶ್ರಮದ ಕಾರ್ಯಾಲಯದಲ್ಲಿ ನೋಂದಾಯಿಸಬಹುದು.
ಹೆಚ್ಚಿನ ವಿವರಗಳಿಗಾಗಿ 2414412 ಸಂಪರ್ಕಿಸಿ.