ಮಂಗಳೂರು: ಕೆಪಿಟಿ ಬಳಿಯ ಅಪಾರ್ಟ್ಮೆಂಟ್ ಒಂದರ 14ನೇ ಮಹಡಿಯಿಂದ ಯುವಕನೋರ್ವ ಕೆಳಗೆ ಬಿದ್ದು ಸಾವನಪ್ಪಿರುವ ಘಟನೆ ನಡೆದಿದೆ.
ಮಹಮ್ಮದ್ ಶಮಾಲ್ (21) ಮೃತಪಟ್ಟ ಯುವಕ. ರಂಜಾನ್ ಹಿನ್ನಲೆಯಲ್ಲಿ ಬೆಳಗ್ಗಿನ ಉಪಾಹಾರ ಸೇವಿಸಿ ಮನೆಯ ಬಾಲ್ಕನಿಗೆ ಹೋಗಿದ್ದರು.
ಈ ವೇಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.