News Karnataka Kannada
Tuesday, May 07 2024
ಮಂಗಳೂರು

ಅಯೋಧ್ಯೆಯ ರಾಮಮಂದಿರದಲ್ಲಿ ಅರಳಲಿದೆ ಮಂಗಳೂರಿನ ನಾಗಲಿಂಗ ಪುಷ್ಪ

Mangaluru's Nagalinga flower to bloom at Ram Temple in Ayodhya
Photo Credit : News Kannada

ಮಂಗಳೂರು: ಅಯೋಧ್ಯೆಯಲ್ಲಿ ರಾಮನ ಮಂದಿರ ನಿರ್ಮಾಣ ಕಾರ್ಯ ಬಹುತೇಕ ಅಂತಿಮ ಹಂತ ತಲುಪಿದ್ದು, ದೇಶದ ಹಲವು ಭಾಗಗಳಿಂದ ಅನೇಕ ರೀತಿಯ ವಸ್ತುಗಳು ಅಯೋಧ್ಯೆಯ ಪುಣ್ಯ ಭೂಮಿಯನ್ನ ತಲುಪಿದೆ.

ಈ ನಡುವೆ ಇದೇ ಮೊದಲ ಬಾರಿಗೆ ದ.ಕ ಜಿಲ್ಲೆಯಿಂದ ನಾಗಲಿಂಗ ಪುಷ್ಪ ಎನ್ನುವ ಗಿಡವೊಂದು ಅಯೋಧ್ಯೆಯ ಪುಣ್ಯ ಭೂಮಿಯನ್ನು ತಲುಪಿದ್ದು, ಶ್ರೀರಾಮನ ಮಂದಿರದ ಎದುರು ಅಲಂಕಾರಕ್ಕಾಗಿ ನೆಡಲು ರಾಮ ಜನ್ಮಭೂಮಿ ಟ್ರಸ್ಟ್ ಆಡಳಿತ ಸಿದ್ದತೆ ನಡೆಸಿದೆ. ದ.ಕ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ನಿಡ್ಡೋಡಿ ಗ್ರಾಮದ ವಿನೇಶ್ ಪೂಜಾರಿ ಎಂಬವರು ತಾವು ಬೆಳೆದ ನಾಗಲಿಂಗ ಪುಷ್ಪದ ಗಿಡವನ್ನು ಅಯೋಧ್ಯೆಗೆ ಕಳುಹಿಸಿ ಕೊಟ್ಟಿದ್ದಾರೆ.

ಈ ಮೊದಲೇ ಇವರಿಗೆ ನಾಗಲಿಂಗ ಪುಷ್ಟದ ಗಿಡವನ್ನು ಅಯೋಧ್ಯೆಗೆ ಕಳುಹಿಸುವ ಉದ್ದೇಶವಿದ್ದು, ಅದರಂತೆ ಗೂಗಲ್ ಮೂಲಕ ಅಯೋಧ್ಯೆಯೆ ನಂಬರ್ ಪಡೆದು ಕರೆ ಮಾಡಿ ವಿಚಾರಿಸಿದ್ದಾರೆ.

ಈ ವೇಳೆ ಅಯೋಧ್ಯ ದೇವಸ್ಥಾನ ಆಡಳಿತ ಮಂಡಳಿ ಗಿಡಗಳನ್ನು ಕಳುಹಿಸಿ ಕೊಡುವಂತೆ ಸೂಚಿಸಿದೆ. ಶಿವಪೂಜೆಗೆ ಪವಿತ್ರ ಎಂದು ನಂಬಲ್ಪಡುವ ನಾಗಲಿಂಗ ಪುಷ್ಪವನ್ನು ಮಲ್ಲಿಕಾರ್ಜುನ ಪುಷ್ಪ, ಶಿವಲಿಂಗ ಪುಷ್ಪ ಎಂದೆಲ್ಲ ಕರೆಯುತ್ತಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು