News Karnataka Kannada
Sunday, May 12 2024
ಮಂಗಳೂರು

ಟೈಲರ್ ಅಂಗಡಿಗೆ ಹೋಗಿ ಬರುತ್ತೇನೆ ಎಂದು ಹೋದ ವಿವಾಹಿತ ಮಹಿಳೆ ನಾಪತ್ತೆ!

Married woman goes missing after she went to tailor's shop on the pretext of coming back!
Photo Credit : News Kannada

ಬಂಟ್ವಾಳ: ಟೈಲರ್ ಅಂಗಡಿಗೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಹೋದ ವಿವಾಹಿತ ಮಹಿಳೆಯೋರ್ವಳು ಕಳೆದ ಮೇ ತಿಂಗಳಿನಿಂದ ನಾಪತ್ತೆಯಾಗಿದ್ದಾಳೆ ಎಂದು ಮನೆಯವರು ತಡವಾಗಿ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬಿ.ಮೂಡ ಗ್ರಾಮದ ಮುಗ್ದಲ್ ಗುಡ್ಡೆ ನಿವಾಸಿ ವಾಣಿಶ್ರೀ ನಾಪತ್ತೆಯಾದ ಮಹಿಳೆ.

ವಾಣಿ ಶ್ರೀ ಅವರನ್ನು ಕಳೆದ 10 ವರ್ಷಗಳ ಹಿಂದೆ ವೇಣೂರಿನ ಯೋಗೀಶ್ ಎಂಬಾತನಿಗೆ ಮದುವೆ ಮಾಡಿ ಕೊಡಲಾಗಿತ್ತು. ಆದರೆ ಅಬಳಿಕ ಗಂಡ ಹಾಗೂ ಇಬ್ಬರು ಮಕ್ಕಳ ಜೊತೆ ಬಂಟ್ವಾಳದ ತಾಯಿ ಮನೆಯಲ್ಲಿ ವಾಸವಾಗಿದ್ದಳು.
ಆದರೆ ಮೇ. 21 ರಂದು ವಾಣಿಶ್ರೀ ಅವರು ಹಳೆಯಂಗಡಿಯ ಪರಿಚಿತ ವ್ಯಕ್ತಿ ವರುಣ್ ಎಂಬಾತನ ಜೊತೆ ಹೋಗಿದ್ದಳು. ಆದರೆ ಮರುದಿನ ಮಂಗಳೂರಿನಿಂದ ಮಗಳನ್ನು ಕರೆದುಕೊಂಡು ಬದಲಾಗಿತ್ತು. ಈ ಘಟನೆ ನಡೆದು ನಾಲ್ಕು ದಿನದ ಬಳಿಕ ಟೈಲರ್ ಅಂಗಡಿಗೆ ಹೋಗಿ‌ಬರುತ್ತೇನೆ ಎಂದು ಮನೆಯಲ್ಲಿ ಧರಿಸಿದ ಬಟ್ಟೆಯಲ್ಲಿ ಹೋದವಳು ವಾಪಾಸು ಮನೆಗೆ ಬಂದಿಲ್ಲ ಎಂದು ಬಂಟ್ವಾಳ ‌ನಗರ ಪೊಲೀಸ್ ಠಾಣೆಗೆ ಈಕೆಯ ತಾಯಿ ಸುನಂದಾ ಅವರು ದೂರು ನೀಡಿದ್ದಾರೆ.

ಟೈಲರ್ ಅಂಗಡಿಯಲ್ಲಿ ವಿಚಾರಿಸಿದಾಗ ಅಲ್ಲಿಗೂ ಬರದೆ ನಾಪತ್ತೆಯಾಗಿದ್ದು ಈಕೆ ಮತ್ತೆ ಹಳೆಯಂಗಡಿಯ ವರುಣ್ ಜೊತೆಗೆ ಹೋಗಿರಬಹುದು ಎಂದು ತಾಯಿ ಸಂಶಯವನ್ನು ವ್ಯಕ್ತಪಡಿಸಿದ್ದಾರೆ. ಜೊತೆಗೆ ಮಗಳನ್ನು ಹುಡುಕಿಕೊಡಿ ಎಂದು ಬಂಟ್ವಾಳ ‌ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು