Categories: ಮಂಗಳೂರು

ನಾರಾವಿ ಸಮೀಪ ಮಾಪಲದಲ್ಲಿ ಭಾರೀ ಸ್ಪೋಟ – ಆತಂಕಕ್ಕೊಳಗಾದ ಸ್ಥಳೀಯರು

ಬೆಳ್ತಂಗಡಿ: ನಾರಾವಿ ಸನಿಹದ ಮಾಪಲ ಎಂಬಲ್ಲಿ ಗುಡ್ಡಜರಿತದ ಸದ್ದು ಸ್ಫೋಟಿಸಿದಂತೆ ಕೇಳಿದ ಹಿನ್ನಲೆಯಲ್ಲಿ ಪರಿಸರದ ನಾಗರಿಕರು ಆತಂಕಕ್ಕೊಳಗಾಗಿದ್ದಾರೆ.

ಪಶ್ಚಿಮ ಘಟ್ಟ ಪ್ರದೇಶದ ಕುದುರೆಮುಖ ಅಭಯಾರಣ್ಯ ವ್ಯಾಪ್ತಿಯ ನಾರಾವಿ ಭಾಗದಲ್ಲಿ ಬುಧವಾರ ಸಂಜೆ ಭಾರಿ ಸ್ಪೋಟದ ಸದ್ದಿನೊಂದಿಗೆ ಇಲ್ಲಿನ ಸುವರ್ಣ ನದಿಯಲ್ಲಿ ಕೆಸರು ಮಿಶ್ರಿತ ನೀರು ಹರಿದಿತ್ತು. ಭಾರಿ ಮಳೆ ಸುರಿದಿದ್ದು ಜನರು ಜನ ಸ್ಪೋಟದ ಭೀತಿಗೊಳಗಾಗಿದ್ದರು. ಆದರೆ ಇದು ಇಲ್ಲಿನ ಮಾಪಲ ಪ್ರದೇಶದಲ್ಲಿ ಗುಡ್ಡಜರಿತ ಉಂಟಾಗಿರುವುದರುವುದರಿಂದ ಈ ಸದ್ದು ಕೇಳಿ ಬಂದಿದೆ ಎಂದು ಹೇಳಲಾಗುತ್ತಿದೆ.

ಇಲ್ಲಿನ ಸ್ಪೋಟದ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಲಭಿಸಿಲ್ಲ ಎಂದು ಬೆಳ್ತಂಗಡಿ ತಹಸೀಲ್ದಾರ್ ತಿಳಿಸಿದ್ದಾರೆ. ನೂರಾಲ್ಬೆಟ್ಟು ನಾರಾವಿ ಕುತ್ಲೂರು,ಈದು ಮೊದಲಾದ ಪ್ರದೇಶಗಳು ಶೇ.90 ಅರಣ್ಯ ಆವೃತವಾಗಿವೆ.

ನಾರಾವಿ ಸೂರ್ಯ ನಾರಾಯಣ ದೇವಸ್ಥಾನದ ಬಳಿ ಹರಿಯುತ್ತಿರುವ ಸುವರ್ಣಾ ನದಿಯಲ್ಲಿ ಏಕಾಏಕಿ ಪ್ರವಾಹ ಪರಿಸ್ಥಿತಿಯು ಕಂಡುಬಂದು ದೇವಾಲಯ ರಸ್ತೆಯು ಸಂಪೂರ್ಣ ಜಲಾವೃತವಾಗಿತ್ತು. ನೀರು ರಸ್ತೆಗೆ ಬರಲು ಒಂದಡಿಯಷ್ಟೇ ಬಾಕಿ ಇತ್ತು. ಬೆಳ್ತಂಗಡಿ-ಕಾರ್ಕಳ ರಾಜ್ಯ ಹೆದ್ದಾರಿಯ ನಾರಾವಿಯ ಅರಸಿಕಟ್ಟೆ ಬಳಿ ಸೇತುವೆ ಮೇಲ್ಭಾಗದಲ್ಲಿ ನೀರು ಹರಿದಿದ್ದು ದ್ವಿಚಕ್ರ ವಾಹನ ಸವಾರರಿಗೆ ಸಂಚರಿಸಲು ತೊಂದರೆ ಉಂಟಾಗಿತ್ತು. ನದಿ ನೀರು ಏರಿದಂತೆ ಭಾರಿ ಟ್ರಾಫಿಕ್ ಜಾಮ್ ಕೂಡ ಉಂಟಾಗಿತ್ತು.

ಬಿರ್ಮೊಟ್ಟು , ರಾಮೆರಗುತ್ತು ಸುತ್ತಮುತ್ತ , ನಾರಾವಿ ಯ ಕೆಳಗಿನ ಪೇಟೆ ಯ ಸುತ್ತಮುತ್ತಲಿನ ತೋಟಗಳಿಗೆ ನೀರು ನುಗ್ಗಿತ್ತು‌.
ಸ್ಥಳೀಯರು ಹೇಳಿರುವಂತೆ ಈ ಬಾರಿಯೇ ಮಳೆಗೆ ಅಂಚಿಕಟ್ಟೆ ಸೇತುವೆ ಮುಳುಗಡೆಯಾಗಿದೆ . ಸೇತುವೆಯ ಮೇಲ್ಭಾಗದಲ್ಲಿ2 ಅಡಿ ನೀರು ನಿಂತಿದ್ದು ಒಂದು ಗಂಟೆ ಕಾಲ ಸಂಚಾರಕ್ಕೆ ತೊಂದರೆ ಉಂಟಾಗಿತ್ತು.

ಇಲ್ಲಿನ ಅರಣ್ಯ ಭಾಗದಲ್ಲಿ ನಿರಂತರವಾಗಿ ಸುರಿದ ಮಳೆ ಹಾಗೂ ನದಿಯಲ್ಲಿ ಮರದ ದಿಮ್ಮಿಗಳು ಸಿಲುಕಿರುವ ಕಾರಣದಿಂದ ನೀರು ಸರಾಗವಾಗಿ ಹರಿಯದೆ ಪ್ರವಾಹ ಸ್ಥಿತಿ ಉಂಟಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

Gayathri SG

Recent Posts

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

14 mins ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

32 mins ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

53 mins ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

1 hour ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

2 hours ago