News Karnataka Kannada
Thursday, May 02 2024
ಮಂಗಳೂರು

ಮಂಗಳೂರು: ಪ್ರವೀಣ್ ಹತ್ಯೆ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ವಿಧಿಸಲು ಮಿಥುನ್ ರೈ ಆಗ್ರಹ

Fake letter controversy: Mithun Rai challenges Kotian to come to oath
Photo Credit : R Bhat

ಮಂಗಳೂರು: ಸುಳ್ಯದಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧಿಸಿದಂತೆ ಪೊಲೀಸರು ಶೀಘ್ರ ಆರೋಪಿಗಳನ್ನು ಪತ್ತೆ ಮಾಡಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಮೃತಪಟ್ಟ ಪ್ರವೀಣ್ ಹಾಗೂ ಕೆಲ ದಿನಗಳ ಹಿಂದೆ ಮತಾಂಧರ ದಾಳಿಗೆ ಒಳಗಾಗಿ ಸಾವನ್ನಪ್ಪಿದ ಮಸೂದ್ ಈ ಇಬ್ಬರ ಕುಟುಂಬಗಳೂ ರಾಜ್ಯ ಸರ್ಕಾರ ಗರಿಷ್ಠ ಪ್ರಮಾಣದಲ್ಲಿ ಪರಿಹಾರ ಒದಗಿಸಬೇಕೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಆಗ್ರಹಿಸಿದ್ದಾರೆ.

ರಾಜಕೀಯ ದ್ವೇಷಕ್ಕಾಗಿ ಯಾವುದೋ ಪಕ್ಷದ ಕಾರ್ಯಕರ್ತರು ಬಲಿಯಾಗಬಾರದು, ರಾಜಕಾರಣಿಗಳ ಮಾತಿಗೆ ಕಿವಿಗೊಟ್ಟು ಸಮಾಜದಲ್ಲಿ ದ್ವೇಷ ಸೃಷ್ಟಿಸಲು ಬಿಡಬಾರದು. ಈಗಾಗಲೇ ಕರಾವಳಿಯಲ್ಲಿ ಕೋಮು ದ್ವೇಷಕ್ಕೆ ಅನೇಕ ಯುವಕರು ಬಲಿಯಾಗಿದ್ದಾರೆ ಇದನ್ನೇ ಮುಂದಿಟ್ಟು ಕೊಂದು ಅನೇಕರು ಶಾಸಕರು ಸಂಸದರು ಆಗಿದ್ದಾರೆ, ಚುನಾವಣೆಯಲ್ಲಿ ಗೆದ್ದ ಬಳಿಕ ಅವರ ಮನೆಯವರನ್ನು ತಿರುಗಿ ನೋಡಿದ ಉದಾಹರಣೆಗಳಿಲ್ಲ.

ಇನ್ನಾದರೂ ಯುವಸಮೂಹ ಅರ್ಥಮಾಡಿಕೊಂಡು ರಾಜಕಾರಣಿಗಳು ದ್ವೇಷದ ಮಾತಿಗೆ ಬಲಿಯಾಗದೆ ಸಮಾಜಮುಖಿ ಕೆಲಸ ಮಾಡಬೇಕು ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು . ಕಾಂಗ್ರೆಸ್ ಮುಖಂಡರಾದ ಮಮತಾ ಗಟ್ಟಿ , ಶುಭೋದಯ ಆಳ್ವ, ಅನಿಲ್ ಕುಮಾರ್, ಸವಾದ್ ಸುಳ್ಯ, ಶಾಂತಲಾ ಗಟ್ಟಿ, ಚಂದ್ರಕಲಾ, ಅಪ್ಪಿ ಮೊದಲಾದವರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು