News Karnataka Kannada
Tuesday, April 30 2024
ಮಂಗಳೂರು

ಕೂಳೂರಿನಲ್ಲಿ ಅಯ್ಯಪ್ಪ ದೇವಸ್ಥಾನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಡಾ.ಭರತ್ ಶೆಟ್ಟಿ ವೈ

MLA Dr Bharath Shetty Y lays foundation stone for construction of Ayyappa temple in Kulur
Photo Credit : News Kannada

ಕೂಳೂರು: ರಾಷ್ಟ್ರೀಯ ಹೆದ್ದಾರಿ 66ರ ಕೂಳೂರಿನಲ್ಲಿ ಹೊಸ ಸೇತುವೆ ನಿರ್ಮಾಣ ಸಂದರ್ಭ ಸ್ಥಳಾಂತರಗೊಂಡಿದ್ದ ಕೂಳೂರು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಶಾಸಕರಾದ ಡಾ.ಭರತ್‌ ಶೆಟ್ಟಿ ವೈ ಶುಕ್ರವಾರ ಶಂಕು ಸ್ಥಾಪನೆ ನೆರವೇರಿಸಿದರು.

ದೇವಸ್ಥಾನ ಸರಕಾರಿ ಭೂಮಿಯಲ್ಲಿದ್ದರೂ, ಸ್ಥಳಾಂತರದ ಸಂದರ್ಭ ಇದರ ಸಮಿತಿಯವರು ಶಾಸಕರಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಭೂಮಿ ದೊರಕಿಸುವಂತೆ ಮನವಿ ಮಾಡಿದ ಮೇರೆಗೆ ಬಂಗ್ರಕೂಳೂರು ರಸ್ತೆ ಬದಿ 55 ಸೆಂಟ್ ಸರಕಾರಿ ಜಾಗವನ್ನು ಮಾಡಿಕೊಟ್ಟಿದ್ದು, ಈ ಸಂದರ್ಭ ಸಮಿತಿ ವತಿಯಿಂದ ಶಾಸಕರನ್ನು ಸಮ್ಮಾನಿಸಲಾಯಿತು. ಮುಂದಿನ ದಿನಗಳಲ್ಲಿ ಅಯ್ಯಪ್ಪ ಮಾಲಾ ವೃತಧಾರಿಗಳಿಗೆ ಇಲ್ಲಿ ತಂಗಲು ಸಮುದಾಯ ಭವನದ ಭರವಸೆಯನ್ನು ಶಾಸಕರು ನೀಡಿದರು.

ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಮನಪಾ ಸದಸ್ಯ ಅನಿಲ್‌ ಕುಮಾರ್, ದೇವಸ್ಥಾನದ ಸಮಿತಿ ಗೌರವಾಧ್ಯಕ್ಷ ಸುರೇಶಂದ್ರ ಶೆಟ್ಟಿ, ಪ್ರಮುಖರಾದ ಪ್ರಜ್ಞೇಶ್ ಶೆಟ್ಟಿ, ರಮೇಶ್ ಶೆಟ್ಟಿ, ದೇವಸ್ಥಾನದ ತಂತ್ರಿಗಳು, ಆಡಳಿತ ಸಮಿತಿಯವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು