ಪುತ್ತೂರು: ಬಿಜೆಪಿಯ ಯುವ ನಾಯಕನಾಗಿದ್ದ ಪ್ರವೀಣ್ ನೆಟ್ಟಾರು ಹತ್ಯೆಯಾಗಿ ಇಂದಿಗೆ (ಜುಲೈ.26) ಒಂದು ವರ್ಷವಾಗಿದ್ದು ಮನೆ ಸಮೀಪದಲ್ಲಿರುವ ಪುತ್ಥಳಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಾಲಾರ್ಪಣೆ ಮಾಡಿದ್ದಾರೆ. ಪ್ರವೀಣ್ ನೆಟ್ಟಾರು ಅಬ್ತ ತಂದೆ ಶೇಖರ ಪೂಜಾರಿಯವರು ದೀಪ ಬೆಳಗಿಸಿ ಬಳಿಕ ಆಗಮಿಸಿದ ಗಣ್ಯರು ಪುತ್ಥಳಿಗೆ ಪುಷ್ಪಾರ್ಚನೆ ಮಾಡಿದರು.
ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಮಾತನಾಡಿ, ಪ್ರವೀಣ್ ನೆಟ್ಟಾರುರವರು ದುಷ್ಕರ್ಮಿಗಳ ಕೃತ್ಯಕ್ಕೆ ಬಲಿಯಾಗಿ ಇಂದಿಗೆ ಒಂದು ವರ್ಷವಾಗಿದ್ದು, ಪ್ರಮುಖ ನಾಲ್ಕು ಜನರ ಆರೋಪಿಗಳ ಬಂಧನ ಆಗಬೇಕಷ್ಟೆ. ತಲೆಮರೆಸಿಕೊಂಡಿರುವವರ ಮನೆಯಲ್ಲಿ ಪೋಸ್ಟರ್ ಅಂಟಿಸಲಾಗಿದೆ. ಇವರ ಬಂಧನ ಕೂಡಲೇ ಆಗಬೇಕು ಎಂದಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಧಾಕೃಷ್ಣ ರೈ ಬೂಡಿಯಾರ್, ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಕಾರ್ಯದರ್ಶಿ ಶ್ರೀನಾಥ್ ರೈ ಬಾಳಿಲ, ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ, ಜಿಲ್ಲಾ ಯುವಮೋರ್ಚಾ ಜಿಲ್ಲಾಧ್ಯಕ್ಷ ಗುರುದತ್ ನಾಯಕ್, ಮಹೇಶ್ ಶೆಟ್ಟಿ, ಮೇನಾಲ, ವಸಂತ ನಡುಬೈಲು, ಸಚಿನ್ ಪೂವಾಜೆ, ಪ್ರವೀಣ್ ಪತ್ನಿ ಶ್ರೀಮತಿ ನೂತನ ಪ್ರವೀಣ್, ತಾಯಿ ರತ್ನಾವತಿ ಹಾಗೂ ಕುಟುಂಬಸ್ಥರು, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಐಪಿಎಲ್ ಬೆಟ್ಟಿಂಗ್ನಲ್ಲಿ ಲಕ್ಷ ಲಕ್ಷ ಹಣ ಕಳೆದುಕೊಂಡ ಯುವಕನೊಬ್ಬ ಲಾಡ್ಜ್ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ…
ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89)…
ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…
ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…
ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…
ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…