News Karnataka Kannada
Thursday, May 02 2024
ಮಂಗಳೂರು

ಮಾನಹಾನಿ ಪ್ರಕರಣ: ಪುತ್ತೂರು ಶಾಸಕರ ಆಪ್ತ ಸಹಾಯಕರಿಂದ ದೂರು ದಾಖಲು

Puttur: Mathandur turns to Mahalingeshwara
Photo Credit : News Kannada

ಪುತ್ತೂರು: ಶಾಸಕ ಸಂಜೀವ ಮಠಂದೂರು ಅವರನ್ನು ಹೋಲುವ ಫೊಟೋಗಳನ್ನು ಮಹಿಳೆಯ ಫೊಟೊದೊಂದಿಗೆ ಜೋಡಣೆ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಲಾಗುತ್ತಿದೆ. ಈ ಬಗ್ಗೆ ತಕ್ಷಣ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಶಾಸಕರ ಆಪ್ತ ಸಹಾಯಕ ವಸಂತ್ ಎಸ್. ದೂರಿದ್ದಾರೆ.

ಹಲಸೂರು ಗೇಟ್ ಪೊಲೀಸ್ ಠಾಣೆಯ ಸೈಬರ್ ಕ್ರೈಮ್ ವಿಭಾಗಕ್ಕೆ ನೀಡಿರುವ ದೂರಿನಲ್ಲಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.

ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರು ಅವರ ಫೊಟೋವನ್ನು ಮಹಿಳೆಯೊಬ್ಬರ ಫೊಟೋದೊಂದಿಗೆ ಎಡಿಟ್ ಮಾಡಿ, ಫೇಸ್ ಬುಕ್, ವಾಟ್ಸ್ ಆ್ಯಪ್ ಮೊದಲಾದ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗಿದೆ. ಶಾಸಕರ ಮಾನಹಾನಿ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೈಬರ್ ವಿಭಾಗದ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು