Categories: ಮಂಗಳೂರು

ಪರಿಶಿಷ್ಟ ಸಮುದಾಯ-ಪಂಗಡಕ್ಕೆ ಶಾಸಕ ವೇದವ್ಯಾಸ ಕಾಮತರು ನೀಡಿರುವ ಕೊಡುಗೆ ಅಪಾರ

ಮಂಗಳೂರು: ನಗರದ ಕೊಡಿಯಾಲ್’ಬೈಲ್ ನಲ್ಲಿರುವ ಅಟಲ್ ಸೇವಾ ಕೇಂದ್ರದಲ್ಲಿ ದಲಿತ ಮುಖಂಡರಿಂದ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಶಾಸಕ ವೇದವ್ಯಾಸ ಕಾಮತರ ಅವಧಿಯಲ್ಲಿ ನಗರ ವ್ಯಾಪ್ತಿಯ ದಲಿತ ಕಾಲೋನಿ, ಅಂಬೇಡ್ಕರ್ ಭವನ, ಕುದ್ಮುಲ್ ರಂಗರಾವ್ ಭವನ, ಪೌರ ಕಾರ್ಮಿಕರ ಕಟ್ಟಡ ಹಾಗೂ ದೈವಸ್ಥಾನಗಳಿಗೆ ಹರಿದು ಬಂದಿರುವ ಸುಮಾರು 40 ಕೋಟಿಗಳ ದೊಡ್ಡ ಮೊತ್ತದ ಅನುದಾನಗಳ ಬಗ್ಗೆ ವಿವರಿಸಲಾಯಿತು.

ರಾಜ್ಯ ಸರಕಾರ, ಮಹಾನಗರ ಪಾಲಿಕೆ, ಎಂ ಆರ್ ಪಿ ಎಲ್ ನ ಸಿ ಆರ್ ಎಫ್ ಫಂಡ್ ಹೀಗೆ ಲಭ್ಯವಿರುವ ಎಲ್ಲಾ ಕಡೆಯಿಂದಲೂ ಅನುದಾನ ತರುವಲ್ಲಿ ಶಾಸಕರ ಅವಿರತ ಪ್ರಯತ್ನಕ್ಕೆ ನಮ್ಮ ಸಮಾಜದ ಕಡೆಯಿಂದ ತುಂಬು ಹೃದಯದ ಧನ್ಯವಾದಗಳು. ಸತತ ಎರಡನೇ ಬಾರಿಯೂ ದಲಿತೋದ್ಧಾರಕ ಕುದ್ಮುಲ್ ರಂಗರಾವ್ ಅವರ ಸಮಾಧಿಗೆ ನಮನ ಸಲ್ಲಿಸುವ ಮೂಲಕ ನಾಮಪತ್ರ ಸಲ್ಲಿಸಿರುವ ವೇದವ್ಯಾಸರು ಕುದ್ಮುಲ್ ರಂಗರಾವ್ ಅವರ ಆಶಯದಂತೆ ದಲಿತ ಸಮುದಾಯದ ಶ್ರೇಯೋಭಿವೃದ್ಧಿಗಾಗಿ ದುಡಿಯುತ್ತಿದ್ದು ನಮ್ಮ ಸಮಾಜಕ್ಕೆ ಅವರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ. ಇಂತಹ ಸಾಮಾಜಿಕ ಕಳಕಳಿ ಹೊಂದಿರುವ ಬಿಜೆಪಿ ಹಾಗೂ ವೇದವ್ಯಾಸರಿಗೆ ಇನ್ನು ಮುಂದೆಯೂ ನಮ್ಮ ಬೆಂಬಲ ಇರುತ್ತದೆ ಎಂದು ದಲಿತ ಮುಖಂಡರು ಹೇಳಿದರು

ಈ ಸಂದರ್ಭದಲ್ಲಿ ಮಾಜಿ ಮೇಯರ್ ಪ್ರವೀಣ್ ಉಮನಾಥ ಅಮೀನ್, ಪ್ರಸನ್ನ, ಬಿಜೆಪಿ ಮಂಡಲದ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ಚಿಲಿಂಬಿ, ಎಸ್ಸಿ ಮೋರ್ಚಾ ಕಾರ್ಯದರ್ಶಿ ಗೀತಾ ಭವಾನಿ ಮುಂತಾದವರು ಉಪಸ್ಥಿತರಿದ್ದರು

Sneha Gowda

Recent Posts

ಮಲೆನಾಡಿಗೆ ತಂಪೆರೆದ ವರುಣ-ಆಲಿಕಲ್ಲು ಮಳೆ

ಜಿಲ್ಲೆಯ ಬಹುತೇಕ ಕಡೆ ಇಂದು ಗುಡುಗು, ಸಿಡಿಲಿನೊಂದಿಗೆ ಆಲಿಕಲ್ಲು ಮಳೆ ಸುರಿದಿದೆ. ಹಲವು ದಿನಗಳಿಂದ ವಿಪರೀತ ತಾಪಮಾನದಿಂದ ಬಸವಳಿದಿದ್ದ ಜನರಿಗೆ…

3 mins ago

ರೈತರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

ರೈತರಿಗೆ ಆಗಾಗ್ಗೆ ಉಪಟಳ ನೀಡುತ್ತಾ ತಲೆನೋವಾಗಿದ್ದ ಪುಂಡಾನೆಯನ್ನು ಸುಮಾರು  ಇಪ್ಪತೈದು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ  ಅರಣ್ಯಾಧಿಕಾರಿಗಳು ಗೋಪಾಲಸ್ವಾಮಿ ಬೆಟ್ಟದ…

19 mins ago

ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕಗೊಂಡಿದ್ದಾರೆ. 2023 ರಲ್ಲಿ ಭಾರತದ ರಾಷ್ಟ್ರಪತಿ ದೌಪದಿ ಮುರ್ಮು ಅವರಿಂದ…

21 mins ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

33 mins ago

ಮದ್ದೂರು ಅರಣ್ಯದಲ್ಲಿ ಬೆಂಕಿ ಅವಘಡ : ಆರೋಪಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಮದ್ದೂರು ವಲಯದಲ್ಲಿ ಕಳೆದ ಏಪ್ರಿಲ್ 24 ರಂದು ಬೆಂಕಿ ಅವಘಡ ಸಂಭವಿಸಿ ಅಪಾರ ಪ್ರಮಾಣದ…

49 mins ago

ಮುಂದಿನ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆ: ಹವಮಾನ ಇಲಾಖೆ

ಸಿಲಿಕಾನ್​ ಸಿಟಿ ಮಂದಿಗೆ ಮತ್ತೆ ಮಳೆರಾಯ ತಂಪೆರೆದಿದ್ದಾನೆ. ದಿಢೀರ್​ ಮಳೆಯಿಂದ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ. ಬೆಂಗಳೂರು ಸೇರಿದಂತೆ…

52 mins ago