ಬಂಟ್ವಾಳ: ತಾಲೂಕಿನಲ್ಲಿಯೂ ಶನಿವಾರ ಸಾಧಾರಣ ಮಳೆಯಾಗಿದ್ದು, ಬಿಸಿಲಿನ ಬೇಗೆಯಿಂದ ಮುಕ್ತಿ ದೊರೆತಿದೆ. ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣವಿದ್ದು, ಆಗಾಗ್ಗೆ ಮಳೆ ಧಾರಾಕಾರವಾಗಿ ಸುರಿಯಿತು. ಇದರಿಂದಾಗಿ ಬಿಸಿಲ ಬೇಗೆಗೆ ಬಸವಳಿದಿದ್ದ ಜನತೆಗೆ ಮಳೆ ತಂಪೆರೆದಂತಾಗಿದೆ.
ವಾಡಿಕೆಯ ಮುಂಗಾರು ಕೇರಳ ಪ್ರವೇಶವಾಗಿದ್ದು, ಅದರೊಂದಿಗೆ ಚಂಡಮಾರುತದ ಪ್ರಭಾವವೂ ಇರುವ ಕಾರಣ ಈಗ ಮಳೆಯಾಗುತ್ತಿದ್ದು, ಕಚೇರಿ, ಶಾಲೆ, ಕಾಲೇಜುಗಳಿಗೆ ತೆರಳುವವರು ಮೊದಲೇ ಸಿದ್ಧರಾಗಿದ್ದರು. ಬಸ್ ನಿಲ್ದಾಣ ಸಹಿತ ಹಲವೆಡೆ ಹೂಳೆತ್ತದ ಕಾರಣ ರಸ್ತೆಯಲ್ಲೇ ನೀರು ನಿಂತ ದೃಶ್ಯಗಳು ಕಂಡುಬಂದವು. ಇನ್ನು ಬಿ.ಸಿ.ರೋಡ್ ನಲ್ಲಿ ಮಂಗಳೂರಿಗೆ ತೆರಳುವ ಪ್ರಯಾಣಿಕರು ಎಂದಿನಂತೆಯೇ ನೀರಿನ ಮಧ್ಯೆ ನಿಂತರೆ, ದಶಕಗಳಿಂದ ಮಳೆಗಾಲದಲ್ಲಿ ನೀರು ನಿಲ್ಲುವ ಜಾಗವಾಗಿ ಪ್ರಸಿದ್ಧಿ ಪಡೆದಿದ್ದ ಬಿ.ಸಿ.ರೋಡಿನ ಭೂ ಅಭಿವೃದ್ಧಿ ಬ್ಯಾಂಕ್ ಕಟ್ಟಡದ ಮುಂಭಾಗದ ರಸ್ತೆ ಕಾಂಕ್ರೀಟ್ ಆಗಿ ಬದಲಾದರೂ ನೀರು ಹರಿದುಹೋಗಲು ದಾರಿ ಇಲ್ಲದೆ ರಸ್ತೆಯಲ್ಲೇ ನೀರು ನಿಂತಿತ್ತು.
ಆಸ್ತಿ ಆಸೆಯಿಂದಾಗಿ ಹೆತ್ತ ತಂದೆ ಎಂದು ನೋಡದೆ ಮನಬಂದಂತೆ ಹೊಡೆದಿದ್ದಾನೆ. ಆತನ ಹೊಡೆತದ ನೋವು ತಾಳಲಾರದೆ ವೃದ್ಧ ಪ್ರಾಣಬಿಟ್ಟಿದ್ದಾರೆ. ಈ…
ಅಕ್ರಮವಾಗಿ ಮಸೀದಿ ಒಳಗೆ ನುಗ್ಗಿದ ಮೂವರು ಮಾಸ್ಕ್ ಧರಿಸಿದ ದುಷ್ಕರ್ಮಿಗಳು ಅಮಾನುಷವಾಗಿ ದೊಣ್ಣೆಗಳಿಂದ ಹೊಡೆದು ಧರ್ಮಗುರುವನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ.…
ಚುನಾವಣೆಗೂ ಮುನ್ನ ಇಂದೋರ್ನ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಜೆಡಿಎಸ್…
ನ್ಯೂಸ್ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್ ಪ್ರೈಸಸ್ ಹಾಗೂ ಸ್ಪೇಷಲ್ ಪೇರೆಂಟ್ಸ್ ಸಪೋರ್ಟ್ ಗ್ರೂಪ್ ಅವರ ಸಹಯೋಗದೊಂದಿಗೆ ಐಬ ಅಸೋಸಿಯೇಷನ್…
ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಹಗರಣ ಈಗ ಎಲ್ಲೆಡೆ ಸದ್ದು ಮಾಡುತ್ತಿದ್ದು, ಇದನ್ನೇ ಕಾಂಗ್ರೆಸ್ ಪ್ರಮುಖ ಅಸ್ತ್ರವನ್ನಾಗಿ…