ಮಂಗಳೂರು: ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಕಾಲಿಗೆ ಚಕ್ರ ಕಟ್ಟಿಕೊಂಡವಂತೆ ದೇಶದುದ್ದಕ್ಕೂ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ ಇಂದು (ಏ.14) ರಾಜ್ಯಕ್ಕೆ ಆಗಮಿಸಲಿದ್ದು, ಸಂಜೆ 4.30 ರಿಂದ 5.20ರವರೆಗೆ ಮೈಸೂರಿನಲ್ಲಿ ಸಮಾವೇಶ ನಡೆಸಿ ಹಳೇ ಮೈಸೂರು ಭಾಗದ NDA ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಈ ವೇಳೆ ಮಾಜಿ ಪ್ರಧಾನಿ ದೇವೇಗೌಡರು ಮೋದಿಗೆ ಸಾಥ್ ನೀಡಲಿದ್ದಾರೆ.
ಮೈಸೂರಿನ ಸಮಾವೇಶದ ಬಳಿಕ ಪ್ರಧಾನಿ ಮೋದಿ ಮಂಗಳೂರಿಗೆ ತೆರಳಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರವಾಗಿ ಅಬ್ಬರದ ರೋಡ್ ಶೋ ನಡೆಸಲಿದ್ದಾರೆ. ಸಂಜೆ 7:45 ಕ್ಕೆ ನಾರಾಯಣಗುರು ವೃತ್ತದಲ್ಲಿ ನಾರಾಯಣಗುರು ಪ್ರತಿಮೆಗೆ ಮಾಲಾರ್ಪಣೆ ಮಾಡಿ ರೋಡ್ ಶೋ ಆರಂಭಿಸಲಿದ್ದಾರೆ.
ಮಹಾನಗರ ಪಾಲಿಕೆ ಮುಂಭಾಗದಿಂದ ಬಲ್ಲಾಳ ಬಾಗ್, ಎಂ.ಜಿ.ರಸ್ತೆಯಾಗಿ ಪಿವಿಎಸ್ ಸರ್ಕಲ್ ಬಳಿ ಬಲಕ್ಕೆ ತಿರುಗಿ ರಾಷ್ಟ್ರಕವಿ ಗೋವಿಂದ ಪೈ ಸರ್ಕಲ್ವರೆಗೆ ರೋಡ್ ಶೋ ಸಾಗಲಿದೆ. ರಾತ್ರಿ 8:30ರೊಳಗೆ ರೋಡ್ ಶೋ ಮುಗಿಯಲಿದೆ. ಈಗಾಗಲೇ ಮಂಗಳೂರಿನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ.