News Karnataka Kannada
Thursday, May 09 2024
ಮಂಗಳೂರು

ಮೂಡುಬಿದಿರೆ: ವೃತ್ತ ತೆರವಿಗೆ ಕಾಂಗ್ರೆಸ್ ಆಗ್ರಹ

Moodbidri: Congress demands removal of circle
Photo Credit : News Kannada

ಮೂಡುಬಿದಿರೆ: ಇಲ್ಲಿನ ಮೆಸ್ಕಾಂ ಬಳಿ ವೇಣೂರು-ಬಿಸಿರೋಡನ್ನು ಸಂಧಿಸುವ ರಾಜ್ಯ ಹೆದ್ದಾರಿಯಲ್ಲಿ ಪಿಡಿಬ್ಲ್ಯುಡಿ ಇಲಾಖೆ ವತಿಯಿಂದ ನಿರ್ಮಾಣವಾಗುತ್ತಿರುವ ವೃತ್ತ ಅವೈಜ್ಞಾನಿಕ ರೀತಿಯಲ್ಲಿದೆ ಎಂದು ಆರೋಪಿಸಿ ಕಾಂಗ್ರೆಸ್ ಶುಕ್ರವಾರ ಪ್ರತಿಭಟನೆ ನಡೆಸಿ ಸರ್ಕಲ್ ತೆರವಿಗೆ ಆಗ್ರಹಿಸಿದೆ.

ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಅಭಯಚಂದ್ರ ಜೈನ್ ಶಾಸಕರ ನಿಧಿಯಿಂದ ರೂ 5 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ವೃತ್ತ ಅವೈಜ್ಞಾನಿಕ ರೀತಿಯಲ್ಲಿದೆ. ಈ ರಸ್ತೆಯಲ್ಲಿ ದಿನಕ್ಕೆ ನೂರಾರು ವಾಹನಗಳು ಓಡಾಡುತ್ತಿದ್ದು, ಬೃಹದಾಕಾರದ ವೃತ್ತದಿಂದಾಗಿ ವಾಹನಗಳ ಸಂಚಾರಕ್ಕೆ ವ್ಯತ್ಯಯವಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆ ಇದೆ. ಈಗಾಗಲೇ ಪ್ರತಿಭಟನೆ ನಡೆಸಿ ಪುರಸಭೆ, ಪಿಡುಬ್ಲ್ಯುಡಿ ಎಂಜಿನಿಯರ್ ಮತ್ತು ಶಾಸಕರನ್ನು ಎಚ್ಚರಿಸಲಾಗಿದೆ. ಜಿಲ್ಲಾಧಿಕಾರಿಗೆ ಮನವಿ ನೀಡಿದ್ದಾಗ ಎರಡು ದಿನ ಸಮಯಾವಕಾಶ ಕೇಳಿದ್ದರು. ಆದರೆ ಏನೂ ಪ್ರಗತಿಯಾಗಿಲ್ಲ. ಶೇ.40 ಪರ್ಸಂಟೇಜ್ ಕಮಿಷನ್‌ಗಾಗಿ ಶಾಸಕರ ಮೂಲಕ ಸರ್ಕಾರದ ಹಣ ದುರ್ಬಳಕೆಯಾಗುತ್ತಿದೆ. ತನ್ನ ಸಂಬAಧಿಕರ ಹೆಸರಿನಲ್ಲಿ ಕಾಮಗಾರಿ ಗುತ್ತಿಗೆ ನಡೆಸುತ್ತಿರುವ ಶಾಸಕರಿಗೆ ಜನರ ಕಷ್ಟ ಅರ್ಥವಾಗುತ್ತಿಲ್ಲ ಎಂದು ಆರೋಪಿಸಿದರು.

ಅವೈಜ್ಞಾನಿಕ ಸರ್ಕಲ್ ಅನ್ನು ಸರಿಪಡಿಸುವಂತೆ ಖುದ್ದು ನಾನೇ ದ.ಕ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ ನೀಡಿದ್ದೆ. ಎರಡು ದಿನ ಸಮಯಾವಕಾಶ ಕೇಳಿದ್ದ ಜಿಲ್ಲಾಧಿಕಾರಿ ನಂತರ ಯಾವುದೇ ಕ್ರಮ ಕೈಗೊಳ್ಳದೆ ಸುಮ್ಮನಾಗಿದ್ದಾರೆ. ಜನರಿಗಾಗುವ ತೊಂದರೆಯನ್ನು ನೋಡಿ ನಾವು ಸುಮ್ಮನಿರುವುದಿಲ್ಲ. ಶೀಘ್ರದಲ್ಲೆ ದ.ಕ ಜಿಲ್ಲಾಧಿಕಾರಿ ಕಚೇರಿ ಎದುರು ಮೂಡುಬಿದಿರೆ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಅಭಯಚಂದ್ರ ಎಚ್ಚರಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಪ್ರಿಯಾ ಡಿ.ಶೆಟ್ಟಿ, ಪುರಸಭೆ ಸದಸ್ಯರಾದ ಕೊರಗಪ್ಪ, ಸುರೇಶ್ ಕೋಟ್ಯಾನ್, ಸುರೇಶ್ ಪ್ರಭು, ರೂಪಾ ಎಸ್. ಶೆಟ್ಟಿ, ಪುರಂದರ ದೇವಾಡಿಗ, ಇಮಾಯುತ್ತಲ್ಲಾ, ಇಕ್ಬಾಲ್ ಕರೀಂ ಪಕ್ಷದ ಪ್ರಮುಖರಾದ ಜಯ ಕುಮಾರ್ ಶೆಟ್ಟಿ, ಚಂದ್ರಹಾಸ್ ಸನಿಲ್, ಅಲ್ವಿನ್ ಮಿನೇಜಸ್ ಮತ್ತಿತರರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು