ಮೂಡುಬಿದಿರೆ: ರಿಡ್ಜ್ಸ್ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಗೋವುಗಳನ್ನು ಬಜರಂಗದಳದ ಕಾರ್ಯಕರ್ತರು ಮತ್ತು ಮೂಡುಬಿದಿರೆ ಪೊಲೀಸರು ಸೋಮವಾರ ಮುಂಜಾನೆ ರಕ್ಷಿಸಿದ್ದಾರೆ.
ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆಂಬ ಖಚಿತ ಮಾಹಿತಿ ಪಡೆದ ಬಜರಂಗದಳದ ಕಾರ್ಯಕರ್ತರು ಮೂಡುಬಿದಿರೆ ಪೊಲೀಸರಿಗೆ ಮಾಹಿತಿ ನೀಡಿ ಜಂಟಿ ಕಾರ್ಯಚರಣೆ ನಡೆಸಿ ಕೆಲ್ಲಪುತ್ತಿಗೆ ಬಳಿಯಿಂದ ಕಾರನ್ನು ಹಿಂಬಾಲಿಸಿಕೊಂಡು ಬಂದು ಜಿ.ಕೆ.ಗಾರ್ಡನ್ ಬಳಿ ದಾಳಿ ನಡೆಸಿದ್ದಾರೆ.
ಈ ಸಂದರ್ಭ ಕಾರಿನಲ್ಲಿದ್ದ ಇಬ್ಬರು ಗೋಕಳ್ಳರು ಕಾರನ್ನು ಮತ್ತು ಮೊಬೈಲ್ ಗಳನ್ನು ಬಿಟ್ಟು ಪರಾರಿಯಾಗಿದ್ದಾರೆ. ಬಜರಂಗದಳದ ತಾಲೂಕು ಸಂಚಾಲಕ ಅಭಿಲಾಷ್ ಸಹಿತ ಕಾರ್ಯಕರ್ತರು ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರಿಗೆ…
ಕೊಪ್ಪಾ ತಾಲೂಕಿನ ಕಾಡ್ಕೆರೆಯಲ್ಲಿ ಕುಡಿಯುವ ನೀರಿನ ಹಳ್ಳಕ್ಕೆ ಪ್ರಭಾವಿಗಳು ನಿರ್ಮಿಸಿರುವ ತಡೆಗೋಡೆಯನ್ನು ತೆರವುಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು…
ಕಾಡಾನೆ ಹಾವಳಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದು ವರ್ಷದ ಅವಧಿಯಲ್ಲಿ ಐದು ಜನ ಪ್ರಾಣ ಕಳೆದುಕೊಂಡಿದ್ದಾರೆ.
ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಜೋಡಿ ಕೊಲೆ ಮಾಡಲಾದ ಘಟನೆ ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ನಡೆದಿದೆ.