ಮೂಡುಬಿದಿರೆ: ಕರ್ಣಾಟಕ ಬ್ಯಾಂಕ್ ಶತಮಾನೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಮಹಾವೀರ ಕಾಲೇಜು ಬಳಿಯಿರುವ ಕೋಡಂಗಲ್ಲು ಶಾಖೆಯಲ್ಲಿ ಶತಮಾನೋತ್ಸವ ವರ್ಷಾರಂಭವನ್ನು ಕಾಲೇಜಿನ ಆಡಳಿತ ಮಂಡಳಿ, ಮಾಜಿ ಸಚಿವ ಅಧ್ಯಕ್ಷ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಈ ಪರಿಸರದಲ್ಲಿ ಸಿಂಡಿಕೇಟ್ ಬ್ಯಾಂಕ್ ಸುಮಾರು 40 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು ಬ್ಯಾಂಕ್ಗಳ ವಿಲೀನದಿಂದಾಗಿ ಇಲ್ಲಿದ್ದ ಶಾಖೆ ಸ್ಥಳಾಂತರಗೊಂಡಿತ್ತು. ಇದರಿಂದಾಗಿ ಈ ಭಾಗದ ಗ್ರಾಹಕರಿಗೆ ತೀವ್ರ ತೊಂದರೆಯಾಗಿತ್ತು. ಇದನ್ನು ಮನಗಂಡ ಕರ್ಣಾಟಕ ಬ್ಯಾಂಕ್ ಇಲ್ಲಿ ಶಾಖೆ ತೆರೆದಿರುವುದು ಸಂತಸದ ಸಂಗತಿಯಾಗಿದೆ ಎಂದರು.
ಮಹಾವೀರ ಕಾಲೇಜಿನ ಪ್ರಾಶುಪಾಲ ರಾಧಾಕೃಷ್ಣ ಶೆಟ್ಟಿ, ಎಸ್ಎನ್ಎಂ ಪಾಲಿಟೆಕ್ನಿಕ್ ಪ್ರಾಂಶುಪಾಲ ಜೆ.ಜೆ ಪಿಂಟೋ, ಎಂಕೆಎ ಸಿಪಿಎಡ್ನ ಪ್ರಾಂಶುಪಾಲ ಧನಂಜಯ ಶೆಟ್ಟಿ ಹಾಗೂ ಬ್ಯಾಂಕಿನ ಸಿಬ್ಬಂದಿ ಉಪಸ್ಥಿತರಿದ್ದರು.